<p><strong>ಗೌರಿಬಿದನೂರು:</strong> ಜಾತಿ, ಧರ್ಮದ ಹೆಸರಿನಲ್ಲಿ ಮಾನವ ಸಮಾಜವನ್ನು ಒಡೆಯಲಾಗುತ್ತಿದ್ದು, ಮಾನವನ ಮೂಲಹಕ್ಕುಗಳನ್ನು ನಾಶಪಡಿಸ ಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಿ.ಎನ್.ಗಂಗಾಧರಪ್ಪ ತಿಳಿಸಿದರು.<br /> <br /> ತಾಲ್ಲೂಕಿನ ತೊಂಡೇಬಾವಿ ಹೋಬಳಿ ರಾಯ ರೇಖಲಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯ ಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ನಾಮಫಲಕ ಉದ್ಘಾಟಿಸಿ ಮಾತನಾಡಿದರು.<br /> <br /> `ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ ಮತ್ತು ಆದರ್ಶದ ಮೇಲೆ 1970ರಲ್ಲಿ ಪ್ರೊ. ಬಿ. ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿ ಕಟ್ಟಿದರು. ದಲಿತರ ಹಕ್ಕು, ಭೂಮಿ, ಆರ್ಥಿಕ ಅಭಿವೃದ್ಧಿ ಮುಂತಾ ದವುಗಳಿಗಾಗಿ ಸಮಿತಿ ವತಿಯಿಂದ ಹೋರಾಟ ನಡೆಸಿದರು~ ಎಂದರು.<br /> <br /> ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸದಸ್ಯ ಕೆ.ನಂಜುಂಡಪ್ಪ ಮಾತನಾಡಿ, `ತಾಲ್ಲೂಕಿನ ಎಲ್ಲಾ ದಲಿತ ಕಾಲೊನಿಗಳು ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ. ನೀರು, ಚರಂಡಿ, ರಸ್ತೆ ಮುಂತಾದ ಸೌಕರ್ಯಗಳನ್ನು ಪೂರೈಸಬೇಕಿದೆ~ ಎಂದರು.<br /> <br /> ದಲಿತ ಸಂಘರ್ಷ ಸಮಿತಿ ಮುಖಂಡರಾದ ವೆಂಕಟೇಶ್, ಲಕ್ಷ್ಮಿನಾರಾಯಣ, ಜಿ.ಗಂಗಣ್ಣ, ಬಾಲಕೃಷ್ಣ, ಶಿವಶಂಕರ್, ಅಂಜಿ, ವೆಂಕಟೇಶ್, ಗಂಗಾಧರಮೂರ್ತಿ, ರಾಮಕೃಷ್ಣ, ರಮೇಶ್, ಮಲ್ಲಪ್ಪ, ನರಸಿಂಹಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಜಾತಿ, ಧರ್ಮದ ಹೆಸರಿನಲ್ಲಿ ಮಾನವ ಸಮಾಜವನ್ನು ಒಡೆಯಲಾಗುತ್ತಿದ್ದು, ಮಾನವನ ಮೂಲಹಕ್ಕುಗಳನ್ನು ನಾಶಪಡಿಸ ಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಿ.ಎನ್.ಗಂಗಾಧರಪ್ಪ ತಿಳಿಸಿದರು.<br /> <br /> ತಾಲ್ಲೂಕಿನ ತೊಂಡೇಬಾವಿ ಹೋಬಳಿ ರಾಯ ರೇಖಲಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯ ಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ನಾಮಫಲಕ ಉದ್ಘಾಟಿಸಿ ಮಾತನಾಡಿದರು.<br /> <br /> `ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ ಮತ್ತು ಆದರ್ಶದ ಮೇಲೆ 1970ರಲ್ಲಿ ಪ್ರೊ. ಬಿ. ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿ ಕಟ್ಟಿದರು. ದಲಿತರ ಹಕ್ಕು, ಭೂಮಿ, ಆರ್ಥಿಕ ಅಭಿವೃದ್ಧಿ ಮುಂತಾ ದವುಗಳಿಗಾಗಿ ಸಮಿತಿ ವತಿಯಿಂದ ಹೋರಾಟ ನಡೆಸಿದರು~ ಎಂದರು.<br /> <br /> ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸದಸ್ಯ ಕೆ.ನಂಜುಂಡಪ್ಪ ಮಾತನಾಡಿ, `ತಾಲ್ಲೂಕಿನ ಎಲ್ಲಾ ದಲಿತ ಕಾಲೊನಿಗಳು ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ. ನೀರು, ಚರಂಡಿ, ರಸ್ತೆ ಮುಂತಾದ ಸೌಕರ್ಯಗಳನ್ನು ಪೂರೈಸಬೇಕಿದೆ~ ಎಂದರು.<br /> <br /> ದಲಿತ ಸಂಘರ್ಷ ಸಮಿತಿ ಮುಖಂಡರಾದ ವೆಂಕಟೇಶ್, ಲಕ್ಷ್ಮಿನಾರಾಯಣ, ಜಿ.ಗಂಗಣ್ಣ, ಬಾಲಕೃಷ್ಣ, ಶಿವಶಂಕರ್, ಅಂಜಿ, ವೆಂಕಟೇಶ್, ಗಂಗಾಧರಮೂರ್ತಿ, ರಾಮಕೃಷ್ಣ, ರಮೇಶ್, ಮಲ್ಲಪ್ಪ, ನರಸಿಂಹಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>