<p><strong>ಗೌರಿಬಿದನೂರು: </strong>ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ತಾಲ್ಲೂಕಿನ ಪುರ ಕ್ಲಸ್ಟರ್ನ ಸಂಪನ್ಮೂಲ ಶಿಕ್ಷಕ ವೆಂಕಟಾಚಲಪತಿ ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿ ಭೂಮೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ `ಮೀನಾ ಮೇಳ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಮೀನಾ ತಂಡಗಳನ್ನು ರಚಿಸುವ ಮೂಲಕ ವಿದ್ಯಾರ್ಥಿನಿಯರಲ್ಲಿ ವೃತ್ತಿ ಕೌಶಲ್ಯದ ತರಬೇತಿ ನೀಡಬೇಕಿದೆ~ ಎಂದರು.<br /> <br /> ವಿದ್ಯಾರ್ಥಿನಿಯರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸುಂದರ ಜೀವನ ರೂಪಿಸಬೇಕಿದೆ. ಟೈಲರಿಂಗ್, ಬ್ಯೂಟಿಷಿಯನ್, ಕರಾಟೆ, ಕ್ಯಾಂಡಲ್, ನಾಟಕ ಮುಂತಾದವುಗಳ ಕುರಿತು ತರಬೇತಿ ನೀಡುವುದರ ಮೂಲಕ ಬಾಲಕಿಯರಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಬಹುದು ಎಂದು ತಿಳಿಸಿದರು.<br /> <br /> ಮಿಣಕನಗುರ್ಕಿ, ಜರಬಂಡಹಳ್ಳಿ ಮತ್ತು ಭೂಮೇನಹಳ್ಳಿ ಶಾಲೆಯ ಮಕ್ಕಳು ಕರಾಟೆ ಮತ್ತು ನೃತ್ಯ ಪ್ರದರ್ಶಿಸಿದರು. <br /> ಜಿಲ್ಲಾ ಪಂಚಾಯಿತಿ ಸದಸ್ಯೆ ರಾಧಮ್ಮ, ಭೂಮೇನಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಮುನಿಲಕ್ಷಮ್ಮ, ಸಹ ಶಿಕ್ಷಕಿ ಸಂಧ್ಯಾ, ತಾಲ್ಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಚಾಂದ್ಪಾಷ, ಶಿಕ್ಷಕರಾದ ನಾಗರಾಜ್, ಅಂಬರೀಶ್, ಮಂಜುನಾಥ್, ಲಕ್ಷ್ಮಿ ಉಪಸ್ಥಿತರಿದ್ದರು.<br /> <br /> <strong>ಸರ್ಕಾರದ ನೆರವಿನ ಸದುಪಯೋಗಕ್ಕೆ ಕರೆ</strong><br /> <strong>ಬಾಗೇಪಲ್ಲಿ: </strong>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವು ಒದಗಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಬಾಲಕಿಯರು ಉತ್ತಮ ವಿದ್ಯಾಭ್ಯಾಸ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ತಿಳಿಸಿದರು.<br /> <br /> ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಕೇಂದ್ರ ಮಟ್ಟದ ಅಂತರ ಶಾಲಾ `ಮೀನಾ ಮೇಳ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು ಎಂದು ಕರೆ ನೀಡಿದರು.<br /> <br /> ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಕಲಿತು, ಅನಕ್ಷರಸ್ಥರಿಗೆ ವಿದ್ಯೆ ಹೇಳಿ ಕೊಡುವ ಮೂಲಕ ಸಾಕ್ಷರತೆ ಹರಡಲು ಸಹಕರಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತಾ ಆಂದೋಲನ ಹಾಗೂ ಜನಜಾಗೃತಿ ಇನ್ನಷ್ಟು ಹೆಚ್ಚಬೇಕಿದೆ ಎಂದು ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮದ ಅಂಗವಾಗಿ ನಡೆದ ನಾಟಕ, ಅಣುಕು ಪ್ರದರ್ಶನ, ಗ್ರಾಮಸಭೆ ಹಾಗೂ ಚರ್ಚಾ ಸ್ಫರ್ಧೆಯಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡರು. ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಮಿಟ್ಟೇಮರಿ ಪ್ರೌಢಶಾಲೆಯ ಪ್ರಭಾವಿ ಮುಖ್ಯ ಶಿಕ್ಷಕಿ ಸಿ.ಪದ್ಮಾವತಮ್ಮ ಬಹುಮಾನ ವಿತರಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅಮರಾವತಿ, ಗ್ರಾಮ ಪಂಚಾಯಿತಿ ಸದಸ್ಯ ಕಾಮರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ನಾರಾಯಣಸ್ವಾಮಿಶೆಟ್ಟಿ, ಮುಖ್ಯ ಶಿಕ್ಷಕ ಡಿ.ಎಂ.ಚೌಡಪ್ಪ, ಡಿಜಿಸಿಓ ಲಕ್ಷ್ಮೀ, ಬಿಜಿಸಿಓ ಕೋಮಲ, ಶಿಕ್ಷಕರಾದ ಎನ್.ಜಯರಾಮರೆಡ್ಡಿ, ಕೆ.ಎನ್.ಕೃಷ್ಣಪ್ಪ, ನಂಜುಂಡಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ತಾಲ್ಲೂಕಿನ ಪುರ ಕ್ಲಸ್ಟರ್ನ ಸಂಪನ್ಮೂಲ ಶಿಕ್ಷಕ ವೆಂಕಟಾಚಲಪತಿ ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿ ಭೂಮೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ `ಮೀನಾ ಮೇಳ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಮೀನಾ ತಂಡಗಳನ್ನು ರಚಿಸುವ ಮೂಲಕ ವಿದ್ಯಾರ್ಥಿನಿಯರಲ್ಲಿ ವೃತ್ತಿ ಕೌಶಲ್ಯದ ತರಬೇತಿ ನೀಡಬೇಕಿದೆ~ ಎಂದರು.<br /> <br /> ವಿದ್ಯಾರ್ಥಿನಿಯರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸುಂದರ ಜೀವನ ರೂಪಿಸಬೇಕಿದೆ. ಟೈಲರಿಂಗ್, ಬ್ಯೂಟಿಷಿಯನ್, ಕರಾಟೆ, ಕ್ಯಾಂಡಲ್, ನಾಟಕ ಮುಂತಾದವುಗಳ ಕುರಿತು ತರಬೇತಿ ನೀಡುವುದರ ಮೂಲಕ ಬಾಲಕಿಯರಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಬಹುದು ಎಂದು ತಿಳಿಸಿದರು.<br /> <br /> ಮಿಣಕನಗುರ್ಕಿ, ಜರಬಂಡಹಳ್ಳಿ ಮತ್ತು ಭೂಮೇನಹಳ್ಳಿ ಶಾಲೆಯ ಮಕ್ಕಳು ಕರಾಟೆ ಮತ್ತು ನೃತ್ಯ ಪ್ರದರ್ಶಿಸಿದರು. <br /> ಜಿಲ್ಲಾ ಪಂಚಾಯಿತಿ ಸದಸ್ಯೆ ರಾಧಮ್ಮ, ಭೂಮೇನಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಮುನಿಲಕ್ಷಮ್ಮ, ಸಹ ಶಿಕ್ಷಕಿ ಸಂಧ್ಯಾ, ತಾಲ್ಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಚಾಂದ್ಪಾಷ, ಶಿಕ್ಷಕರಾದ ನಾಗರಾಜ್, ಅಂಬರೀಶ್, ಮಂಜುನಾಥ್, ಲಕ್ಷ್ಮಿ ಉಪಸ್ಥಿತರಿದ್ದರು.<br /> <br /> <strong>ಸರ್ಕಾರದ ನೆರವಿನ ಸದುಪಯೋಗಕ್ಕೆ ಕರೆ</strong><br /> <strong>ಬಾಗೇಪಲ್ಲಿ: </strong>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವು ಒದಗಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಬಾಲಕಿಯರು ಉತ್ತಮ ವಿದ್ಯಾಭ್ಯಾಸ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ತಿಳಿಸಿದರು.<br /> <br /> ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಕೇಂದ್ರ ಮಟ್ಟದ ಅಂತರ ಶಾಲಾ `ಮೀನಾ ಮೇಳ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು ಎಂದು ಕರೆ ನೀಡಿದರು.<br /> <br /> ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಕಲಿತು, ಅನಕ್ಷರಸ್ಥರಿಗೆ ವಿದ್ಯೆ ಹೇಳಿ ಕೊಡುವ ಮೂಲಕ ಸಾಕ್ಷರತೆ ಹರಡಲು ಸಹಕರಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತಾ ಆಂದೋಲನ ಹಾಗೂ ಜನಜಾಗೃತಿ ಇನ್ನಷ್ಟು ಹೆಚ್ಚಬೇಕಿದೆ ಎಂದು ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮದ ಅಂಗವಾಗಿ ನಡೆದ ನಾಟಕ, ಅಣುಕು ಪ್ರದರ್ಶನ, ಗ್ರಾಮಸಭೆ ಹಾಗೂ ಚರ್ಚಾ ಸ್ಫರ್ಧೆಯಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡರು. ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಮಿಟ್ಟೇಮರಿ ಪ್ರೌಢಶಾಲೆಯ ಪ್ರಭಾವಿ ಮುಖ್ಯ ಶಿಕ್ಷಕಿ ಸಿ.ಪದ್ಮಾವತಮ್ಮ ಬಹುಮಾನ ವಿತರಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅಮರಾವತಿ, ಗ್ರಾಮ ಪಂಚಾಯಿತಿ ಸದಸ್ಯ ಕಾಮರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ನಾರಾಯಣಸ್ವಾಮಿಶೆಟ್ಟಿ, ಮುಖ್ಯ ಶಿಕ್ಷಕ ಡಿ.ಎಂ.ಚೌಡಪ್ಪ, ಡಿಜಿಸಿಓ ಲಕ್ಷ್ಮೀ, ಬಿಜಿಸಿಓ ಕೋಮಲ, ಶಿಕ್ಷಕರಾದ ಎನ್.ಜಯರಾಮರೆಡ್ಡಿ, ಕೆ.ಎನ್.ಕೃಷ್ಣಪ್ಪ, ನಂಜುಂಡಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>