ಚಿಕ್ಕಬಳ್ಳಾಪುರ: ‘ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ನಮಗೆ ಕಾಲಮಿತಿ ನಿಗದಿ ಮಾಡಿದೆ. ಹೀಗಾಗಿ ನಾವು ರಾಜೀನಾಮೆ ನೀಡಲು ಸಿದ್ಧರಿದ್ದೇವೆ. ಕೆಲ ಸಚಿವರ ರಾಜೀನಾಮೆ ಬಳಿಕ ಅವಕಾಶ ವಂಚಿತರು, ಅಸಮಾಧಾನಗೊಂಡಿರುವವರಿಗೂ ಮಂತ್ರಿ ಭಾಗ್ಯ ದೊರೆಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.