ಬ್ರಾಹ್ಮಣ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಷ ಭಟ್ಟ ಮಾತನಾಡಿ, ‘ನಮ್ಮ ಸಂಸ್ಕೃತಿಯಲ್ಲಿ ಸಂಗೀತಕ್ಕೆ ಉನ್ನತ ಸ್ಥಾನವಿದೆ. ಅಂತಹ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ದಾಸವರೇಣ್ಯರ ಆರಾಧನಾ ಮಹೋತ್ಸವವನ್ನು ನಿರಂತರವಾಗಿ ಮುಂದುವರಿಸಿಕೊಂಡು ಬರುವ ಮೂಲಕ ಮುಂದಿನ ತಲೆಮಾರಿಗೆ ಸಂಗೀತ ಕೊಂಡೊಯ್ಯುವ ಆಶಯ ಹೊಂದಿರುವ ಈ ಕಾರ್ಯ ಶ್ಲಾಘನೀಯ’ ಎಂದು ತಿಳಿಸಿದರು.
ಅಟ್ಟೂರು ಸ್ವಾಮಿ ಕೆ.ಎಸ್.ವೆಂಕಟೇಶಯ್ಯ, ಚಿಂತಲಪಲ್ಲಿ ಸಂಗೀತ ಪರಂಪರಾ ಟ್ರಸ್ಟ್ನ ಅಧ್ಯಕ್ಷೆ ನಿರ್ಮಲಾ ಶ್ರೀಧರ್, ಗೌರವ ಅಧ್ಯಕ್ಷ ಅಶ್ವತ್ಥ್ ನಾರಾಯಣಾಚಾರ್, ಕಾರ್ಯದರ್ಶಿ ಚಿಂತಲಪಲ್ಲಿ ಕಿಶೋರ್ ಕುಮಾರ್, ಸಹ ಕಾರ್ಯದರ್ಶಿ ಜಿ.ಸತ್ಯನಾರಾಯಣ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.