<p><strong>ಗೌರಿಬಿದನೂರು: </strong>ಲೋಕಾಯುಕ್ತ ಸಂಸ್ಥೆ ಬಲಯುತವಾಗಿದ್ದು, ತಪ್ಪು ಮಾಡಿದವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆ ತಪ್ಪುವುದಿಲ್ಲ ಎಂದು ಲೋಕಾಯುಕ್ತ ಡಿವೈಎಸ್ಪಿ ಬೂದಿಹಾಳ್ ಹೇಳಿದರು.<br /> <br /> ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸಾರ್ವಜನಿಕರ ಕುಂದುಕೊರೆತೆ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಂದ ದೂರುಗಳು ಬಂದಾಗ ಸಂಬಂಧಪಟ್ಟ ಅಧಿಕಾರಿಗಳು ಅವರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ಸಲಹೆ ಸೂಚನೆಗಳನ್ನು ನೀಡಿ, ವಿಳಂಬ ಮಾಡದೆ ಕೆಲಸ ಮಾಡಿಕೊಡಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ಸಾರ್ವಜನಿಕರಿಗಾಗಿ ನಾವು ಎಂಬುವುದನ್ನು ಅರಿತುಕೊಳ್ಳಬೇಕು. ವಿನಾ ಕಾರಣ ಯಾರನ್ನೂ ಅಲೆದಾಡಿಸದೆ ಕಾನೂನಿನ ಅಡಿಯಲ್ಲಿ ಕೆಲಸಗಳನ್ನು ಸುಗಮವಾಗಿ ಮಾಡಿಕೊಡಬೇಕು ಎಂದು ಕರೆ ನೀಡಿದರು.<br /> <br /> ಸರ್ಕಾರ `ಸಕಾಲ~ ಯೋಜನೆ ಜಾರಿಗೆ ತಂದಿರುವುದರಿಂದ ಅಧಿಕಾರಿಗಳು ನಿರ್ದಿಷ್ಟ ಸಮಯದಲ್ಲಿ ಕೆಲಸ ಮಾಡಿಕೊಡಬೇಕಾಗುತ್ತದೆ ಎಂದು ಒತ್ತಡ ಹೇರುವ ರಾಜಕಾರಿಣಿಗಳಿಗೆ ಸ್ಪಷ್ಟಪಡಿಸಬೇಕು. ರಾಜಕೀಯ ಒತ್ತಡಕ್ಕೆ, ಆಸೆ ಆಮಿಶಗಳಿಗೆ ಒಳಗಾಗದೆ ಕೆಲಸ ಮಾಡಬೇಕು ಎಂದು ತಿಳಿಸಿದರು.<br /> <br /> ಕಂದಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಇಲಾಖೆಗಳಲ್ಲಿ ನಿಗದಿತ ಸಮಯಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ಅನೇಕ ಅರ್ಜಿಗಳು ವರ್ಷಗಟ್ಟಲೆ ಬಾಕಿ ಇರುವ ಕುರಿತು ಸಾರ್ವಜನಿಕರು ದೂರುತ್ತಾರೆ ಎಂದು ನುಡಿದರು.<br /> <br /> ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿಯಲ್ಲಿ 20 ವರ್ಷಗಳಿಂದ ನೀರು ಸರಬರಾಜು ಮಾಡುತ್ತಿದ್ದ ಅಂಜಿನಪ್ಪ ಎಂಬುವವರು ತಮ್ಮನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ವಿನಾ ಕಾರಣ ಕೆಲಸದಿಂದ ತೆಗೆದಿದ್ದಾರೆ ಎಂದು ದೂರು ಸಲ್ಲಿಸಿರು. ಅರ್ಜಿ ಪರಿಶೀಲಿಸಿ ವಾರದೊಳಗೆ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.<br /> <br /> ಪಟ್ಟಣದ ಅಭಿಲಾಷ್ ಬಡಾವಣೆಯಲ್ಲಿ ಪುರಸಭೆ ಉದ್ಯಾನವನ ನಿರ್ಮಿಸಿದೆ. ಆದರೆ ಅದು ನಿರ್ವಹಣೆಯಿಲ್ಲದೆ ಹಾಳಾಗಿದೆ. ಈ ಕುರಿತು ಪುರಸಭೆಯಲ್ಲಿ ಪ್ರಶ್ನಿಸಿದರೆ ಹಮಾಲಿಗಳಿಗೆ ಸಂಬಳ ನೀಡಲು ಹಣವಿಲ್ಲ ಎಂಬ ಹಾರಿಕೆ ಉತ್ತರ ಸಿಗುತ್ತಿದೆ ಎಂದು ಹರೀಶ ಎನ್ನುವವರು ದೂರು ಸಲ್ಲಿಸಿದರು.<br /> <br /> ಸಭೆಯಲ್ಲಿ ಪಾಲ್ಗೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಅರ್ಜಿ ವಿಲೇವಾರಿ ವಿಳಂಬಕ್ಕೆ ಕಾರಣಗಳನ್ನು ವಿವರಿಸಿದರು.<br /> <br /> <strong>ಬರಡು: ಎಚ್ಚರಿಕೆ<br /> ಮುಳಬಾಗಲು</strong>: ಕೆರೆ- ಕಲ್ಯಾಣಿಗಳನ್ನು ಉಳಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿದು, ಕೋಲಾರ ಜಿಲ್ಲೆ ನೀರಿಲ್ಲದೆ ಬರಡಾಗುವ ಅಪಾಯವಿದೆ ಎಂದು ಜಿಲ್ಲಾಧಿಕಾರಿ ಡಾ.ವಿಶ್ವನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ಲೋಕಾಯುಕ್ತ ಸಂಸ್ಥೆ ಬಲಯುತವಾಗಿದ್ದು, ತಪ್ಪು ಮಾಡಿದವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆ ತಪ್ಪುವುದಿಲ್ಲ ಎಂದು ಲೋಕಾಯುಕ್ತ ಡಿವೈಎಸ್ಪಿ ಬೂದಿಹಾಳ್ ಹೇಳಿದರು.<br /> <br /> ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸಾರ್ವಜನಿಕರ ಕುಂದುಕೊರೆತೆ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಂದ ದೂರುಗಳು ಬಂದಾಗ ಸಂಬಂಧಪಟ್ಟ ಅಧಿಕಾರಿಗಳು ಅವರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ಸಲಹೆ ಸೂಚನೆಗಳನ್ನು ನೀಡಿ, ವಿಳಂಬ ಮಾಡದೆ ಕೆಲಸ ಮಾಡಿಕೊಡಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ಸಾರ್ವಜನಿಕರಿಗಾಗಿ ನಾವು ಎಂಬುವುದನ್ನು ಅರಿತುಕೊಳ್ಳಬೇಕು. ವಿನಾ ಕಾರಣ ಯಾರನ್ನೂ ಅಲೆದಾಡಿಸದೆ ಕಾನೂನಿನ ಅಡಿಯಲ್ಲಿ ಕೆಲಸಗಳನ್ನು ಸುಗಮವಾಗಿ ಮಾಡಿಕೊಡಬೇಕು ಎಂದು ಕರೆ ನೀಡಿದರು.<br /> <br /> ಸರ್ಕಾರ `ಸಕಾಲ~ ಯೋಜನೆ ಜಾರಿಗೆ ತಂದಿರುವುದರಿಂದ ಅಧಿಕಾರಿಗಳು ನಿರ್ದಿಷ್ಟ ಸಮಯದಲ್ಲಿ ಕೆಲಸ ಮಾಡಿಕೊಡಬೇಕಾಗುತ್ತದೆ ಎಂದು ಒತ್ತಡ ಹೇರುವ ರಾಜಕಾರಿಣಿಗಳಿಗೆ ಸ್ಪಷ್ಟಪಡಿಸಬೇಕು. ರಾಜಕೀಯ ಒತ್ತಡಕ್ಕೆ, ಆಸೆ ಆಮಿಶಗಳಿಗೆ ಒಳಗಾಗದೆ ಕೆಲಸ ಮಾಡಬೇಕು ಎಂದು ತಿಳಿಸಿದರು.<br /> <br /> ಕಂದಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಇಲಾಖೆಗಳಲ್ಲಿ ನಿಗದಿತ ಸಮಯಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ಅನೇಕ ಅರ್ಜಿಗಳು ವರ್ಷಗಟ್ಟಲೆ ಬಾಕಿ ಇರುವ ಕುರಿತು ಸಾರ್ವಜನಿಕರು ದೂರುತ್ತಾರೆ ಎಂದು ನುಡಿದರು.<br /> <br /> ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿಯಲ್ಲಿ 20 ವರ್ಷಗಳಿಂದ ನೀರು ಸರಬರಾಜು ಮಾಡುತ್ತಿದ್ದ ಅಂಜಿನಪ್ಪ ಎಂಬುವವರು ತಮ್ಮನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ವಿನಾ ಕಾರಣ ಕೆಲಸದಿಂದ ತೆಗೆದಿದ್ದಾರೆ ಎಂದು ದೂರು ಸಲ್ಲಿಸಿರು. ಅರ್ಜಿ ಪರಿಶೀಲಿಸಿ ವಾರದೊಳಗೆ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.<br /> <br /> ಪಟ್ಟಣದ ಅಭಿಲಾಷ್ ಬಡಾವಣೆಯಲ್ಲಿ ಪುರಸಭೆ ಉದ್ಯಾನವನ ನಿರ್ಮಿಸಿದೆ. ಆದರೆ ಅದು ನಿರ್ವಹಣೆಯಿಲ್ಲದೆ ಹಾಳಾಗಿದೆ. ಈ ಕುರಿತು ಪುರಸಭೆಯಲ್ಲಿ ಪ್ರಶ್ನಿಸಿದರೆ ಹಮಾಲಿಗಳಿಗೆ ಸಂಬಳ ನೀಡಲು ಹಣವಿಲ್ಲ ಎಂಬ ಹಾರಿಕೆ ಉತ್ತರ ಸಿಗುತ್ತಿದೆ ಎಂದು ಹರೀಶ ಎನ್ನುವವರು ದೂರು ಸಲ್ಲಿಸಿದರು.<br /> <br /> ಸಭೆಯಲ್ಲಿ ಪಾಲ್ಗೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಅರ್ಜಿ ವಿಲೇವಾರಿ ವಿಳಂಬಕ್ಕೆ ಕಾರಣಗಳನ್ನು ವಿವರಿಸಿದರು.<br /> <br /> <strong>ಬರಡು: ಎಚ್ಚರಿಕೆ<br /> ಮುಳಬಾಗಲು</strong>: ಕೆರೆ- ಕಲ್ಯಾಣಿಗಳನ್ನು ಉಳಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿದು, ಕೋಲಾರ ಜಿಲ್ಲೆ ನೀರಿಲ್ಲದೆ ಬರಡಾಗುವ ಅಪಾಯವಿದೆ ಎಂದು ಜಿಲ್ಲಾಧಿಕಾರಿ ಡಾ.ವಿಶ್ವನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>