<p><strong>ಗೌರಿಬಿದನೂರು:</strong> ದೇಶದಲ್ಲಿನ ಭ್ರಷ್ಟಾಚಾರ, ಬಡತನ ನಿರ್ಮೂಲನೆಗೆ ಯುವ ಸಮುದಾಯ ಜಾಗೃತರಾಗಬೇಕು ಎಂದು ತ್ಯಾಗೀಶಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಎಇಎಸ್ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.<br /> <br /> ವಿವೇಕಾನಂದರ ತತ್ವ ಆದರ್ಶಗಳನ್ನು ಯುವ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿನ್ನಲೆಯಲ್ಲಿ ರಥಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 30 ಜಿಲ್ಲೆಗಲ್ಲಿ 220 ಕಾರ್ಯಕ್ರಮಗಳು ನೀಡುವ ಮೂಲಕ ಒಟ್ಟು 10 ಸಾವಿರ ಕಿಲೊ ಮೀಟರ್ ಯಾತ್ರೆ ಸಂಚರಿಸಲಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ನಿರಂಜನ್ ಮಾತನಾಡಿ, ವಿವೇಕಾನಂದರ ಆದರ್ಶಗಳನ್ನು ಯುವಕರು ಪಾಲಿಸಬೇಕು. ಅಧ್ಯಯನ ನಡೆಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ಮಹಾವಾಕ್ಯಾನಂದ ಸ್ವಾಮೀಜಿ, ಶಿವಸ್ವರೂಪನಂದ ಸ್ವಾಮೀಜಿ, ಪ್ರಾಧ್ಯಾಪಕ ವರಹಾಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್, ಉಪನ್ಯಾಸಕ ಚಂದ್ರಶೇಖರ್, ಪುರಸಭೆ ಸದಸ್ಯರಾದ ವಿ.ರಮೇಶ್, ಚಿದಾನಂದಗುಪ್ತ, ನಾಗೇಶ್, ದಯಾನಂದ್, ವಿವಿಧ ಶಾಲಾ ಕಾಲೇಜು ಶಿಕ್ಷಕರು ಪಾಲ್ಗೊಂಡಿದ್ದರು.<br /> <br /> ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶನೈಶ್ಚರ ದೇಗುಲದ ಆವರಣದಿಂದ ರಥಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.<br /> ಮೆರವಣಿಗೆಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಸಮಿತಿ ಸದಸ್ಯರು, ಶಾಲಾ ಮಕ್ಕಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ದೇಶದಲ್ಲಿನ ಭ್ರಷ್ಟಾಚಾರ, ಬಡತನ ನಿರ್ಮೂಲನೆಗೆ ಯುವ ಸಮುದಾಯ ಜಾಗೃತರಾಗಬೇಕು ಎಂದು ತ್ಯಾಗೀಶಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಎಇಎಸ್ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.<br /> <br /> ವಿವೇಕಾನಂದರ ತತ್ವ ಆದರ್ಶಗಳನ್ನು ಯುವ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿನ್ನಲೆಯಲ್ಲಿ ರಥಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 30 ಜಿಲ್ಲೆಗಲ್ಲಿ 220 ಕಾರ್ಯಕ್ರಮಗಳು ನೀಡುವ ಮೂಲಕ ಒಟ್ಟು 10 ಸಾವಿರ ಕಿಲೊ ಮೀಟರ್ ಯಾತ್ರೆ ಸಂಚರಿಸಲಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ನಿರಂಜನ್ ಮಾತನಾಡಿ, ವಿವೇಕಾನಂದರ ಆದರ್ಶಗಳನ್ನು ಯುವಕರು ಪಾಲಿಸಬೇಕು. ಅಧ್ಯಯನ ನಡೆಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ಮಹಾವಾಕ್ಯಾನಂದ ಸ್ವಾಮೀಜಿ, ಶಿವಸ್ವರೂಪನಂದ ಸ್ವಾಮೀಜಿ, ಪ್ರಾಧ್ಯಾಪಕ ವರಹಾಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್, ಉಪನ್ಯಾಸಕ ಚಂದ್ರಶೇಖರ್, ಪುರಸಭೆ ಸದಸ್ಯರಾದ ವಿ.ರಮೇಶ್, ಚಿದಾನಂದಗುಪ್ತ, ನಾಗೇಶ್, ದಯಾನಂದ್, ವಿವಿಧ ಶಾಲಾ ಕಾಲೇಜು ಶಿಕ್ಷಕರು ಪಾಲ್ಗೊಂಡಿದ್ದರು.<br /> <br /> ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶನೈಶ್ಚರ ದೇಗುಲದ ಆವರಣದಿಂದ ರಥಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.<br /> ಮೆರವಣಿಗೆಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಸಮಿತಿ ಸದಸ್ಯರು, ಶಾಲಾ ಮಕ್ಕಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>