ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಅನಿರುದ್ಧ್ ಶ್ರವಣ್ ಅವರನ್ನು ವಿಚಾರಿಸಿದರೆ, ‘ಚುನಾವಣೆ ಎನ್ನುವುದು ಐದು ವರ್ಷಕ್ಕೊಮ್ಮೆ ನಡೆಯುವ ಪ್ರಜಾಪ್ರಭುತ್ವ ಹಬ್ಬ. ಅದರ ಸಿದ್ಧತೆಗಾಗಿ ಎಷ್ಟೊಂದು ಜನರು ಶ್ರಮಿಸುತ್ತಾರೆ. ಅದಕ್ಕಾಗಿಯೇ ಸರ್ಕಾರಗಳು ಸಾರ್ವತ್ರಿಕ ರಜೆ ಘೋಷಿಸುತ್ತವೆ. ಅದನ್ನು ಗಮನದಲ್ಲಿಟ್ಟುಕೊಂಡು ನಾವು ಮೊದಲು ಪ್ರಜ್ಞಾವಂತ ನಾಗರಿಕರಾಗಿ ನೈತಿಕವಾಗಿ ಮತ ಚಲಾಯಿಸಬೇಕು. ಬಳಿಕ ಉಳಿದ ಸಮಯವನ್ನು ಕುಟುಂಬದೊಂದಿಗೆ ಕಳೆಯಬೇಕು’ ಎಂದು ಹೇಳಿದರು.