ಗೌರಿಬಿದನೂರು: ಮಂಚೇನಹಳ್ಳಿ ಹೋಬಳಿ ಕೋಡಿಗಾನಹಳ್ಳಿಯ ನಿವಾಸಿ, ರೇಮಂಡ್ಸ್ ಸಿದ್ಧ ಉಡುಪು ಕಾರ್ಖಾನೆಯ ಉದ್ಯೋಗಿ ಅನಿತಾ ಅವರ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಪಟ್ಟಣದ ಮುನೇಶ್ವರ ಬಡಾವಣೆಯ ನಿವಾಸಿ ಕಿಶೋರ್ (28) ಎಂಬುವರನ್ನು ಬಂಧಿಸಿದ್ದಾರೆ.ಅನಿತಾ ಕಾಣೆಯಾಗಿದ್ದರು. ಮಾ.30 ರಂದು ದೊಡ್ಡಹನುಮೇನಹಳ್ಳಿ ಗೇಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತನಿಖೆ ವೇಳೆ ಅನಿತಾ ಅವರನ್ನು ರೇಮಂಡ್ಸ್ ಕಾರ್ಖಾನೆಯಲ್ಲೇ ಉದ್ಯೋಗಿಯಾಗಿರುವ ಕಿಶೋರ್ ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿತ್ತು.