ಪ್ರತಿಭಟನಾಕಾರರು ಭುವನೇಶ್ವರಿ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಸಮಿತಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಜಯಚಂದ್ರ, ಕಾಳಿಕಾಂಭ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಅಧ್ಯಕ್ಷೆ ಸುಬ್ಬಲಕ್ಷ್ಮಿ ಬ್ರಹ್ಮಚಾರಿ, ಮುಖಂಡರಾದ ಮಂಜುನಾಥ್, ಶ್ರೀಧರ್, ಆನಂದ್, ವಿ.ಭಾರತಿ , ಜಮುನಾ ರಾಮಕೃಷ್ಣಾಚಾರ್ ಹಾಜರಿದ್ದರು.