<p>ಚಿಂತಾಮಣಿ: ಶಿಡ್ಲಘಟ್ಟ, ಚಿಂತಾಮಣಿ, ಶ್ರಿನಿವಾಸಪುರ ತಾಲ್ಲೂಕುಗಳ ಯುವ ಕಾಂಗ್ರೆಸ್ ಸಮಿತಿಯ ಆಂತರಿಕ ಚುನಾವಣೆಯ ಪ್ರಕ್ರಿಯೆ ನಗರದಲ್ಲಿ ಆರಂಭವಾಗಿದ್ದು, ಭಾನುವಾರ ಮತ್ತು ಸೋಮವಾರ ಉತ್ಸಾಹಿಗಳು ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಪರಿಶೀಲನೆ ಇದೇ 13ರಂದು ನಡೆಯಲಿದೆ. 16 ಮತ್ತು 17ರಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರ ಸಮಿತಿಗೆ, 18ರಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಿತಿಗೆ ಹಾಗೂ 19ರಂದು ಶ್ರಿನಿವಾಸಪುರ ಕ್ಷೇತ್ರ ಸಮಿತಿಗೆ ಚುನಾವಣೆ ನಡೆಯಲಿದೆ. ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, 3 ಮುಕ್ತ ಮಹಾ ಪ್ರಧಾನ ಕಾರ್ಯದರ್ಶಿಗಳು ಹಾಗೂ 5 ಮೀಸಲಾತಿ ಮಹಾ ಕಾರ್ಯದರ್ಶಿಗಳ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಸತೀಶ್ಕುಮಾರ್ ತಿಳಿಸಿದರು.<br /> <br /> ರಾಜಕೀಯದಲ್ಲಿ ಆಸಕ್ತಿ ಇರುವ ಯುವಕರನ್ನು ಗುರುತಿಸಿ, ಹೊಸ ರಾಜಕೀಯ ನಾಯಕರನ್ನು ಬೆಳಕಿಗೆ ತರುವ ದೃಷ್ಟಿಯಿಂದ ಚುನಾವಣೆ ನಡೆಸಲಾಗುತ್ತಿದೆ. ಸ್ವತಂತ್ರ ಸಂಸ್ಥೆಯ ವತಿಯಿಂದ ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲಿದೆ ಎಂದರು.<br /> <br /> ಕಾಂಗ್ರೆಸ್ ತತ್ವ, ಆದರ್ಶಗಳಲ್ಲಿ ನಂಬಿಕೆ ಇರುವ ಯಾರು ಬೇಕಾದರೂ ಸದಸ್ಯತ್ವ ಪಡೆಯ ಬಹುದು. ನೊಂದಾಯಿಸಲ್ಪಟ್ಟ ಸದಸ್ಯರು ಮಾತ್ರ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಅರ್ಹರಾಗುತ್ತಾರೆ ಎಂದು ವಿವರಿಸಿದರು.<br /> <br /> <strong>ಹಿಂದಿ ದಿವಸ್</strong><br /> ತಾಲ್ಲೂಕು ಹಿಂದಿ ಶಿಕ್ಷಕರ ಸಂಘವು ಇದೇ 14ರಂದು ನಗರದ ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ `ಹಿಂದಿ ದಿವಸ್~ ಆಯೋಜಿಸಿದೆ ಎಂದು ಸಂಘದ ಅಧ್ಯಕ್ಷ ರಾಮಚಂದ್ರಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಶಿಡ್ಲಘಟ್ಟ, ಚಿಂತಾಮಣಿ, ಶ್ರಿನಿವಾಸಪುರ ತಾಲ್ಲೂಕುಗಳ ಯುವ ಕಾಂಗ್ರೆಸ್ ಸಮಿತಿಯ ಆಂತರಿಕ ಚುನಾವಣೆಯ ಪ್ರಕ್ರಿಯೆ ನಗರದಲ್ಲಿ ಆರಂಭವಾಗಿದ್ದು, ಭಾನುವಾರ ಮತ್ತು ಸೋಮವಾರ ಉತ್ಸಾಹಿಗಳು ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಪರಿಶೀಲನೆ ಇದೇ 13ರಂದು ನಡೆಯಲಿದೆ. 16 ಮತ್ತು 17ರಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರ ಸಮಿತಿಗೆ, 18ರಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಿತಿಗೆ ಹಾಗೂ 19ರಂದು ಶ್ರಿನಿವಾಸಪುರ ಕ್ಷೇತ್ರ ಸಮಿತಿಗೆ ಚುನಾವಣೆ ನಡೆಯಲಿದೆ. ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, 3 ಮುಕ್ತ ಮಹಾ ಪ್ರಧಾನ ಕಾರ್ಯದರ್ಶಿಗಳು ಹಾಗೂ 5 ಮೀಸಲಾತಿ ಮಹಾ ಕಾರ್ಯದರ್ಶಿಗಳ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಸತೀಶ್ಕುಮಾರ್ ತಿಳಿಸಿದರು.<br /> <br /> ರಾಜಕೀಯದಲ್ಲಿ ಆಸಕ್ತಿ ಇರುವ ಯುವಕರನ್ನು ಗುರುತಿಸಿ, ಹೊಸ ರಾಜಕೀಯ ನಾಯಕರನ್ನು ಬೆಳಕಿಗೆ ತರುವ ದೃಷ್ಟಿಯಿಂದ ಚುನಾವಣೆ ನಡೆಸಲಾಗುತ್ತಿದೆ. ಸ್ವತಂತ್ರ ಸಂಸ್ಥೆಯ ವತಿಯಿಂದ ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲಿದೆ ಎಂದರು.<br /> <br /> ಕಾಂಗ್ರೆಸ್ ತತ್ವ, ಆದರ್ಶಗಳಲ್ಲಿ ನಂಬಿಕೆ ಇರುವ ಯಾರು ಬೇಕಾದರೂ ಸದಸ್ಯತ್ವ ಪಡೆಯ ಬಹುದು. ನೊಂದಾಯಿಸಲ್ಪಟ್ಟ ಸದಸ್ಯರು ಮಾತ್ರ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಅರ್ಹರಾಗುತ್ತಾರೆ ಎಂದು ವಿವರಿಸಿದರು.<br /> <br /> <strong>ಹಿಂದಿ ದಿವಸ್</strong><br /> ತಾಲ್ಲೂಕು ಹಿಂದಿ ಶಿಕ್ಷಕರ ಸಂಘವು ಇದೇ 14ರಂದು ನಗರದ ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ `ಹಿಂದಿ ದಿವಸ್~ ಆಯೋಜಿಸಿದೆ ಎಂದು ಸಂಘದ ಅಧ್ಯಕ್ಷ ರಾಮಚಂದ್ರಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>