<p>ಚಿಕ್ಕಬಳ್ಳಾಪುರ: ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಗಳಿಸಲು ಯುವಜನರಿಗೆ ವಿಪುಲ ಅವಕಾಶವಿದ್ದು, ಪ್ರತಿಯೊಬ್ಬರು ಸದ್ಬಳಕೆ ಮಾಡಿಳ್ಳಬೇಕು. ಯಾರೂ ಸಹ ನಿರಾಸೆಗೊಳಗಾಗುವ ಅಗತ್ಯವಿಲ್ಲ ಎಂದು ಲ್ಯಾಡರ್ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಯ ಮುಖ್ಯಕಾರ್ಯ ನಿರ್ವಹಣಾ ಧಿಕಾರಿ ಸಿ.ವಿ.ರಮಣನ್ ತಿಳಿಸಿದರು.<br /> <br /> ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಉದ್ಯೋಗಾ ಕಾಂಕ್ಷಿಗಳಿ ಗಾಗಿ ಗುರುವಾರ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, `ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಾವಕಾಶಗಳು ಅಪಾರವಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು~ ಎಂದರು.<br /> <br /> `ಯಾವುದೇ ರೀತಿಯ ಹಿಂಜರಿಕೆ ಮತ್ತು ಭೀತಿ ವ್ಯಕ್ತಪಡಿಸದೇ ಯುವಜನರು ಉದ್ಯೋಗಾವಕಾಶ ಪಡೆಯಲು ಮುಂದಾಗಬೇಕು. ಸೂಕ್ತ ಮಾರ್ಗದರ್ಶನ ಮತ್ತು ಆತ್ಮವಿಶ್ವಾಸ ವಿದ್ದಲ್ಲಿ, ಯಾವುದೇ ಕಾರ್ಯದಲ್ಲೂ ಯಶಸ್ಸು ಗಳಿಸಬ ಹುದು~ ಎಂದು ಅವರು ತಿಳಿಸಿದರು. ಶಾಲಾ ಶಿಕ್ಷಕ ಸತ್ಯನಾರಾಯಣ ಮತ್ತು ಫ್ಯೂಚರ್ ಲರ್ನಿಂಗ್ ಸಂಸ್ಥೆಯ ಪ್ರತಿನಿಧಿ ಮಧು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> <br /> <strong>ಜ.26ಕ್ಕೆ ಗಣರಾಜ್ಯೋತ್ಸವ </strong><br /> ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ಗಣರಾಜ್ಯೋತ್ಸಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, `ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಆಚರಣೆ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಇಲಾಖೆಯವರಿಗೆ ಉಸ್ತುವಾರಿ ವಹಿಸಲಾಗಿದೆ. ಅಂತಿಮ ಹಂತದ ಸಿದ್ಧತೆ ಮಾಡಲಾಗುತ್ತಿದೆ~ ಎಂದರು.<br /> <br /> <strong>ಇಂದು ಕೆಡಿಪಿ ಸಭೆ</strong><br /> ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 10ಕ್ಕೆ ಸಭೆ ಆರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.<br /> <br /> <strong>ನಾಳೆ ಕೆಡಿಪಿ ಸಭೆ</strong><br /> ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗದ ಸದಸ್ಯೆ ಕೆ.ಕಮಲಾ ಕುಮಾರಿಯವರು ಶನಿವಾರ ಚಿಕ್ಕಬಳ್ಳಾ ಪುರಕ್ಕೆ ಭೇಟಿ ನೀಡಲಿದ್ದಾರೆ. <br /> <br /> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಅವರು ಗಿರಿಜನ ಉಪಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಗಳಿಸಲು ಯುವಜನರಿಗೆ ವಿಪುಲ ಅವಕಾಶವಿದ್ದು, ಪ್ರತಿಯೊಬ್ಬರು ಸದ್ಬಳಕೆ ಮಾಡಿಳ್ಳಬೇಕು. ಯಾರೂ ಸಹ ನಿರಾಸೆಗೊಳಗಾಗುವ ಅಗತ್ಯವಿಲ್ಲ ಎಂದು ಲ್ಯಾಡರ್ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಯ ಮುಖ್ಯಕಾರ್ಯ ನಿರ್ವಹಣಾ ಧಿಕಾರಿ ಸಿ.ವಿ.ರಮಣನ್ ತಿಳಿಸಿದರು.<br /> <br /> ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಉದ್ಯೋಗಾ ಕಾಂಕ್ಷಿಗಳಿ ಗಾಗಿ ಗುರುವಾರ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, `ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಾವಕಾಶಗಳು ಅಪಾರವಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು~ ಎಂದರು.<br /> <br /> `ಯಾವುದೇ ರೀತಿಯ ಹಿಂಜರಿಕೆ ಮತ್ತು ಭೀತಿ ವ್ಯಕ್ತಪಡಿಸದೇ ಯುವಜನರು ಉದ್ಯೋಗಾವಕಾಶ ಪಡೆಯಲು ಮುಂದಾಗಬೇಕು. ಸೂಕ್ತ ಮಾರ್ಗದರ್ಶನ ಮತ್ತು ಆತ್ಮವಿಶ್ವಾಸ ವಿದ್ದಲ್ಲಿ, ಯಾವುದೇ ಕಾರ್ಯದಲ್ಲೂ ಯಶಸ್ಸು ಗಳಿಸಬ ಹುದು~ ಎಂದು ಅವರು ತಿಳಿಸಿದರು. ಶಾಲಾ ಶಿಕ್ಷಕ ಸತ್ಯನಾರಾಯಣ ಮತ್ತು ಫ್ಯೂಚರ್ ಲರ್ನಿಂಗ್ ಸಂಸ್ಥೆಯ ಪ್ರತಿನಿಧಿ ಮಧು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> <br /> <strong>ಜ.26ಕ್ಕೆ ಗಣರಾಜ್ಯೋತ್ಸವ </strong><br /> ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ಗಣರಾಜ್ಯೋತ್ಸಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, `ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಆಚರಣೆ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಇಲಾಖೆಯವರಿಗೆ ಉಸ್ತುವಾರಿ ವಹಿಸಲಾಗಿದೆ. ಅಂತಿಮ ಹಂತದ ಸಿದ್ಧತೆ ಮಾಡಲಾಗುತ್ತಿದೆ~ ಎಂದರು.<br /> <br /> <strong>ಇಂದು ಕೆಡಿಪಿ ಸಭೆ</strong><br /> ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 10ಕ್ಕೆ ಸಭೆ ಆರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.<br /> <br /> <strong>ನಾಳೆ ಕೆಡಿಪಿ ಸಭೆ</strong><br /> ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗದ ಸದಸ್ಯೆ ಕೆ.ಕಮಲಾ ಕುಮಾರಿಯವರು ಶನಿವಾರ ಚಿಕ್ಕಬಳ್ಳಾ ಪುರಕ್ಕೆ ಭೇಟಿ ನೀಡಲಿದ್ದಾರೆ. <br /> <br /> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಅವರು ಗಿರಿಜನ ಉಪಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>