‘ಭೂಮಿಗೆ ನೀರು ತರುವ ನಿಟ್ಟಿನಲ್ಲಿ ಭಗೀರಥ ಮಹರ್ಷಿ ತೋರಿದ ಬದ್ಧತೆಯಿಂದಾಗಿ ನಾವು ಅವರನ್ನು ಇಂದಿಗೂ ಸ್ಮರಿಸುತ್ತೇವೆ. ಜೀವನದಲ್ಲಿ ಯಾವುದೇ ಕಷ್ಟಕರ ಸಾಧನೆಯನ್ನು ಮಾಡಬೇಕೆಂದರೆ ಭಗೀರಥ ಪ್ರಯತ್ನ ಮಾಡಬೇಕು ಎಂದು ಹೇಳುವುದು ಛಲದಿಂದ ಏನಾದರೂ ಸಾಧಿಸಲು ಸಾಧ್ಯ ಎನ್ನುವುದಾಗಿದೆ’ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ಉಪನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ಉಪಸ್ಥಿತರಿದ್ದರು.