ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರತಿಭಟನಾಕಾರರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಬೇಡಿಕೆಗಳನ್ನು ಹದಿನೈದು ದಿನಗಳೊಳಗಾಗಿ ಈಡೇರಿಸುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು. ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಆರ್.ಎನ್. ರಾಜು, ಕಾರ್ಯಕರ್ತರಾದ ನರಸಿಂಹಪ್ಪ, ಗಂಗಾಧರಪ್ಪ, ಮಂಜುನಾಥ್, ಕೃಷ್ಣಪ್ಪ, ವೆಂಕಟೇಶ್, ಆದಿಲಕ್ಷ್ಮಮ್ಮ ಹಾಜರಿದ್ದರು.