<p>ಚಿಕ್ಕಬಳ್ಳಾಪುರ: ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಭಿವೃದ್ಧಿಯಾದರೆ ಸಾಲದು, ಸಮುದಾಯ ಅಭಿವೃದ್ಧಿಯಾಗಬೇಕು. ಸಮಾಜದ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರು ಸಂಕಲ್ಪ ತೊಡಬೇಕು ಎಂದು ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ (ಜೆಸಿಐ) ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎ.ಮೋಹನ್ ತಿಳಿಸಿದರು.<br /> <br /> ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಕುಚಿತ ಮನೋಭಾವ ತೊರೆದು ವಿಶಾಲ ದೃಷ್ಟಿಕೋನದಿಂದ ಚಿಂತನೆ ಮಾಡಬೇಕು ಎಂದರು.<br /> <br /> ಜೆಸಿಐ ಸಂಸ್ಥೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿವಕುಮಾರ್ ಮಾತನಾಡಿ, ಸಮಾಜ ಸೇವೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಜೆಸಿಐ ಸಂಸ್ಥೆಯು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಜಾರಿಗೆ ತರಲಾಗುತ್ತಿದೆ ಎಂದರು.<br /> <br /> ನಗರಸಭೆ ಆರೋಗ್ಯ ನಿರೀಕ್ಷಕ ಹೈದರ್ಅಲಿ ಖಾನ್, ಪೊಲೀಸ್ ಸಿಬ್ಬಂದಿ ವಿ.ನಾರಾಯಣಸ್ವಾಮಿ, ನಿವೃತ್ತ ಶಿಕ್ಷಕ ಸಿ.ಆರ್. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಭಿವೃದ್ಧಿಯಾದರೆ ಸಾಲದು, ಸಮುದಾಯ ಅಭಿವೃದ್ಧಿಯಾಗಬೇಕು. ಸಮಾಜದ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರು ಸಂಕಲ್ಪ ತೊಡಬೇಕು ಎಂದು ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ (ಜೆಸಿಐ) ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎ.ಮೋಹನ್ ತಿಳಿಸಿದರು.<br /> <br /> ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಕುಚಿತ ಮನೋಭಾವ ತೊರೆದು ವಿಶಾಲ ದೃಷ್ಟಿಕೋನದಿಂದ ಚಿಂತನೆ ಮಾಡಬೇಕು ಎಂದರು.<br /> <br /> ಜೆಸಿಐ ಸಂಸ್ಥೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿವಕುಮಾರ್ ಮಾತನಾಡಿ, ಸಮಾಜ ಸೇವೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಜೆಸಿಐ ಸಂಸ್ಥೆಯು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಜಾರಿಗೆ ತರಲಾಗುತ್ತಿದೆ ಎಂದರು.<br /> <br /> ನಗರಸಭೆ ಆರೋಗ್ಯ ನಿರೀಕ್ಷಕ ಹೈದರ್ಅಲಿ ಖಾನ್, ಪೊಲೀಸ್ ಸಿಬ್ಬಂದಿ ವಿ.ನಾರಾಯಣಸ್ವಾಮಿ, ನಿವೃತ್ತ ಶಿಕ್ಷಕ ಸಿ.ಆರ್. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>