<p><strong>ಗೌರಿಬಿದನೂರು:</strong> ಸರ್ಕಾರ ಭರವಸೆ ನೀಡುವುದರ ಬದಲು ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಬಡವರು, ನಿರ್ಗತಿಕರು ಮತ್ತು ಜನ ಸಾಮಾನ್ಯರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಆಗ್ರಹಿಸಿದರು.<br /> <br /> ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರಗಳು ಜನಪರವಾಗಿರಬೇಕೆ ಹೊರತು ಜನರಿಂದ ದೂರವಾಗಬಾರದು’ ಎಂದರು.<br /> <br /> ಜಲತಜ್ಞ ಕೆ.ನಾರಾಯಣಸ್ವಾಮಿ ಮಾತನಾಡಿ, ‘ರಾಜಕೀಯದಲ್ಲಿ ಸಮಾನತೆ ದೊರೆತರೆ ಸಾಲದು, ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ದೊರೆಯಬೇಕು. ಗಾಂಧೀಜಿ ಮತ್ತು ಅಂಬೇಡ್ಕರ್ ತತ್ವ, ಸಿದ್ಧಾಂತ ಪಾಲನೆಯಾಗಬೇಕು’ ಎಂದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ರಾಜ್ಯ ಸಂಘಟನಾ ಸಂಚಾಲಕ ಜಿ.ಎಂ ಶಿವಪ್ರಸಾದ್, ಜನಶಕ್ತಿ ಸಂಘಟನೆ ಮುಖಂಡ ಡಾ,ವಾಸು, ಪುರಸಭೆ ಅಧ್ಯಕ್ಷೆ ಗೀತಾಜಯಂಧರ್ ಉಪಾದ್ಯಕ್ಷ ವಿ.ರಮೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುರಸಭೆ ವತಿಯಿಂದ ಹಮಾಲಿ ಕಾರ್ಮಿಕರಿಗೆ 20 ಕೈಗಾಡಿಗಳನ್ನು ವಿತರಿಸಲಾಯಿತು.<br /> <br /> <strong>ಉಚಿತ ತರಬೇತಿ ಉದ್ಘಾಟನೆ</strong><br /> ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಯಾವುದೇ ಕಾರ್ಯ ಕೈಗೊಂಡಲ್ಲಿ ಯಶಸ್ಸು ದೊರೆಯುತ್ತದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿನಾರಾಯಣರೆಡ್ಡಿ ತಿಳಿಸಿದರು.<br /> <br /> ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರ ಚಂದನಪ್ರಿಯ ತರಬೇತಿ ಮತ್ತು ಅಭಿವೃದ್ಧಿ ಟ್ರಸ್ಟ್ ಏರ್ಪಡಿಸಿದ್ದ ಟ್ರಸ್ಟ್ ಹಾಗೂ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾರ್ಯವು ಬಡವರಿಗೆ, ಜನಸಾಮಾನ್ಯರಿಗೆ ಉಪಯುಕ್ತವಾಗಬೇಕು’ ಎಂದರು.<br /> <br /> ಪುರಸಭೆ ಅಧ್ಯಕ್ಷೆ ಗೀತಾಜಯಂಧರ್ ಮಾತನಾಡಿ, ‘ನೂತನ ಟ್ರಸ್ಟ್ನಿಂದ ಒಂದು ತಿಂಗಳು ಕಾಲ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಮಹಿಳೆಯರು ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸಬಲರಾಗಲು ಸಾಧ್ಯ’ ಎಂದರು.<br /> <br /> ಟ್ರಸ್ಟ್ನ ಅಧ್ಯಕ್ಷ ದೇವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ರಾಘವೇಂದ್ರ ಹನುಮಾನ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.<br /> <strong><br /> ನೇತ್ರ ತಪಾಸಣಾ ಶಿಬಿರ</strong><br /> ಪಟ್ಟಣದ ಎಂಎಸ್ಎಸ್ ಶಾಲೆಯಲ್ಲಿ ಭಾನುವಾರ ನೇತ್ರ ತಪಾಸಣಾ ಶಿಬಿರ ನಡೆಯಿತು. ಮಾಜಿ ಶಾಸಕ ಅಶ್ವತ್ಥನಾರಾಯಣರೆಡ್ಡಿ ಶಿಬಿರ ಉದ್ಘಾಟಿಸಿದರು.<br /> <br /> ಒಟ್ಟು 300 ಜನರನ್ನು ತಪಾಸಣೆ ಮಾಡಲಾಯಿತು. ಅವರಲ್ಲಿ 150 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು.ಅಗತ್ಯವಿದ್ದಲ್ಲಿ ಕನ್ನಡಕ ಮತ್ತು ಔಷಧಿಯನ್ನು ಉಚಿತವಾಗಿ ಪೂರೈಸಲಾಗುವುದು ಎಂದು ಶಿಬಿರದ ವ್ಯವಸ್ಥಾಪಕ ಡಾ. ಜಯರಾಮೇಗೌಡ ತಿಳಿಸಿದರು.<br /> <br /> ಎಂಎಸ್ಎಸ್ ಕಾನ್ವೆಂಟ್ ಕಾರ್ಯದರ್ಶಿ ಪಠಾಣ್, ಕನ್ನಡ ಸೇನೆ ಸಂಘಟನೆ ಅಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.<br /> <br /> <strong>ರೈತಸಂಘ ಘಟಕ ಉದ್ಘಾಟನೆ</strong><br /> ಸಂಘಟನೆ ಮೂಲಕ ಹೋರಾಟ ಕೈಗೊಂಡಲ್ಲಿ ಮಾತ್ರ ಯಶಸ್ಸು ಗಳಿಸಬಹುದು. ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಹೋರಾಟವೇ ಮಾರ್ಗ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲಕ್ಷ್ಮಿನಾರಾಯಣ ತಿಳಿಸಿದರು.<br /> <br /> ಪಟ್ಟಣದ ಹೊರವಲಯದಲ್ಲಿರುವ ಕಲ್ಲೂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ವಿನಾಯಕ ದೇವಾಲಯದಲ್ಲಿ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸಂಘಟನಾತ್ಮಕವಾಗಿ ಹೋರಾಟ ನಡೆಸಿದ್ದಲ್ಲಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.<br /> <br /> ರೈತ ಸಂಘದ ಕಾರ್ಯದರ್ಶಿ ಲೋಕೇಶಗೌಡ ಮಾತನಾಡಿ, ‘ಸುವರ್ಣ ಭೂಮಿ ಯೋಜನೆಯಡಿಯಲ್ಲಿ ಎಲ್ಲ ಫಲಾನುಭವಿಗಳಿಗೆ ಸಹಾಯಧನ ನೀಡಬೇಕು. ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೈಬಿಡಬೇಕು’ ಎಂದರು.<br /> <br /> ಸಂಘದ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ಮುದ್ದುರಂಗಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಗ್ರಾಮಸ್ಥರಾದ ವಿಜಯ ರಾಘವ, ರವಿಕುಮಾರ್, ಗಂಗರಾಜು, ಶಾಂತರಾಜು ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಸರ್ಕಾರ ಭರವಸೆ ನೀಡುವುದರ ಬದಲು ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಬಡವರು, ನಿರ್ಗತಿಕರು ಮತ್ತು ಜನ ಸಾಮಾನ್ಯರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಆಗ್ರಹಿಸಿದರು.<br /> <br /> ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರಗಳು ಜನಪರವಾಗಿರಬೇಕೆ ಹೊರತು ಜನರಿಂದ ದೂರವಾಗಬಾರದು’ ಎಂದರು.<br /> <br /> ಜಲತಜ್ಞ ಕೆ.ನಾರಾಯಣಸ್ವಾಮಿ ಮಾತನಾಡಿ, ‘ರಾಜಕೀಯದಲ್ಲಿ ಸಮಾನತೆ ದೊರೆತರೆ ಸಾಲದು, ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ದೊರೆಯಬೇಕು. ಗಾಂಧೀಜಿ ಮತ್ತು ಅಂಬೇಡ್ಕರ್ ತತ್ವ, ಸಿದ್ಧಾಂತ ಪಾಲನೆಯಾಗಬೇಕು’ ಎಂದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ರಾಜ್ಯ ಸಂಘಟನಾ ಸಂಚಾಲಕ ಜಿ.ಎಂ ಶಿವಪ್ರಸಾದ್, ಜನಶಕ್ತಿ ಸಂಘಟನೆ ಮುಖಂಡ ಡಾ,ವಾಸು, ಪುರಸಭೆ ಅಧ್ಯಕ್ಷೆ ಗೀತಾಜಯಂಧರ್ ಉಪಾದ್ಯಕ್ಷ ವಿ.ರಮೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುರಸಭೆ ವತಿಯಿಂದ ಹಮಾಲಿ ಕಾರ್ಮಿಕರಿಗೆ 20 ಕೈಗಾಡಿಗಳನ್ನು ವಿತರಿಸಲಾಯಿತು.<br /> <br /> <strong>ಉಚಿತ ತರಬೇತಿ ಉದ್ಘಾಟನೆ</strong><br /> ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಯಾವುದೇ ಕಾರ್ಯ ಕೈಗೊಂಡಲ್ಲಿ ಯಶಸ್ಸು ದೊರೆಯುತ್ತದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿನಾರಾಯಣರೆಡ್ಡಿ ತಿಳಿಸಿದರು.<br /> <br /> ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರ ಚಂದನಪ್ರಿಯ ತರಬೇತಿ ಮತ್ತು ಅಭಿವೃದ್ಧಿ ಟ್ರಸ್ಟ್ ಏರ್ಪಡಿಸಿದ್ದ ಟ್ರಸ್ಟ್ ಹಾಗೂ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾರ್ಯವು ಬಡವರಿಗೆ, ಜನಸಾಮಾನ್ಯರಿಗೆ ಉಪಯುಕ್ತವಾಗಬೇಕು’ ಎಂದರು.<br /> <br /> ಪುರಸಭೆ ಅಧ್ಯಕ್ಷೆ ಗೀತಾಜಯಂಧರ್ ಮಾತನಾಡಿ, ‘ನೂತನ ಟ್ರಸ್ಟ್ನಿಂದ ಒಂದು ತಿಂಗಳು ಕಾಲ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಮಹಿಳೆಯರು ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸಬಲರಾಗಲು ಸಾಧ್ಯ’ ಎಂದರು.<br /> <br /> ಟ್ರಸ್ಟ್ನ ಅಧ್ಯಕ್ಷ ದೇವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ರಾಘವೇಂದ್ರ ಹನುಮಾನ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.<br /> <strong><br /> ನೇತ್ರ ತಪಾಸಣಾ ಶಿಬಿರ</strong><br /> ಪಟ್ಟಣದ ಎಂಎಸ್ಎಸ್ ಶಾಲೆಯಲ್ಲಿ ಭಾನುವಾರ ನೇತ್ರ ತಪಾಸಣಾ ಶಿಬಿರ ನಡೆಯಿತು. ಮಾಜಿ ಶಾಸಕ ಅಶ್ವತ್ಥನಾರಾಯಣರೆಡ್ಡಿ ಶಿಬಿರ ಉದ್ಘಾಟಿಸಿದರು.<br /> <br /> ಒಟ್ಟು 300 ಜನರನ್ನು ತಪಾಸಣೆ ಮಾಡಲಾಯಿತು. ಅವರಲ್ಲಿ 150 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು.ಅಗತ್ಯವಿದ್ದಲ್ಲಿ ಕನ್ನಡಕ ಮತ್ತು ಔಷಧಿಯನ್ನು ಉಚಿತವಾಗಿ ಪೂರೈಸಲಾಗುವುದು ಎಂದು ಶಿಬಿರದ ವ್ಯವಸ್ಥಾಪಕ ಡಾ. ಜಯರಾಮೇಗೌಡ ತಿಳಿಸಿದರು.<br /> <br /> ಎಂಎಸ್ಎಸ್ ಕಾನ್ವೆಂಟ್ ಕಾರ್ಯದರ್ಶಿ ಪಠಾಣ್, ಕನ್ನಡ ಸೇನೆ ಸಂಘಟನೆ ಅಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.<br /> <br /> <strong>ರೈತಸಂಘ ಘಟಕ ಉದ್ಘಾಟನೆ</strong><br /> ಸಂಘಟನೆ ಮೂಲಕ ಹೋರಾಟ ಕೈಗೊಂಡಲ್ಲಿ ಮಾತ್ರ ಯಶಸ್ಸು ಗಳಿಸಬಹುದು. ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಹೋರಾಟವೇ ಮಾರ್ಗ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲಕ್ಷ್ಮಿನಾರಾಯಣ ತಿಳಿಸಿದರು.<br /> <br /> ಪಟ್ಟಣದ ಹೊರವಲಯದಲ್ಲಿರುವ ಕಲ್ಲೂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ವಿನಾಯಕ ದೇವಾಲಯದಲ್ಲಿ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸಂಘಟನಾತ್ಮಕವಾಗಿ ಹೋರಾಟ ನಡೆಸಿದ್ದಲ್ಲಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.<br /> <br /> ರೈತ ಸಂಘದ ಕಾರ್ಯದರ್ಶಿ ಲೋಕೇಶಗೌಡ ಮಾತನಾಡಿ, ‘ಸುವರ್ಣ ಭೂಮಿ ಯೋಜನೆಯಡಿಯಲ್ಲಿ ಎಲ್ಲ ಫಲಾನುಭವಿಗಳಿಗೆ ಸಹಾಯಧನ ನೀಡಬೇಕು. ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೈಬಿಡಬೇಕು’ ಎಂದರು.<br /> <br /> ಸಂಘದ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ಮುದ್ದುರಂಗಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಗ್ರಾಮಸ್ಥರಾದ ವಿಜಯ ರಾಘವ, ರವಿಕುಮಾರ್, ಗಂಗರಾಜು, ಶಾಂತರಾಜು ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>