<p>ಶಿಡ್ಲಘಟ್ಟ: ಸಿಇಟಿ ಶುಲ್ಕ ಏರಿಕೆ ಹಾಗೂ ಕಾಮೆಡ್– ಕೆ ಪರವಾಗಿ ನೀತಿ ರೂಪಿಸುತ್ತಿರುವ ಕ್ರಮಗಳನ್ನು ಕೈಬಿಡಬೇಕು. ಸರ್ಕಾರ ವಿದ್ಯಾರ್ಥಿ ಪರ ನಿಲುವು ತಳೆಯಬೇಕು ಎಂದು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು.<br /> <br /> ಸರ್ಕಾರ ಬಡವರ ಪರವಾಗಿ ನೀತಿ ರೂಪಿಸಬೇಕು. ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯ ಅನುಷ್ಠಾನದಿಂದ ಖಾಸಗಿ ಶಾಲೆಗಳಿಗೆ ಅನುಕೂಲವಾಗಲಿದೆ. ಇದು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆ ಕಸಿಯುವ ಪ್ರಯತ್ನ ಎಂದು ಆರೋಪಿಸಿದರು.<br /> <br /> ಕಾಯ್ದೆಯ ಪ್ರಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಅಡಿ ಸೀಟ್ ಲಭ್ಯವಿರುವುದಿಲ್ಲ. ಲಕ್ಷಾಂತರ ರೂಪಾಯಿ ಕ್ಯಾಪಿಟೇಷನ್ ಶುಲ್ಕ ತೆರಲು ಸಾಮರ್ಥ್ಯ ಇಲ್ಲದ ಬಡವರು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.<br /> ಎಸ್ಎಫ್ಐ ಜಿಲ್ಲಾ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಮುಖಂಡರಾದ ಮಂಜುನಾಥ, ಶ್ರೀಧರ್, ಲಕ್ಷ್ಮೀ, ಭವ್ಯಾ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ಸಿಇಟಿ ಶುಲ್ಕ ಏರಿಕೆ ಹಾಗೂ ಕಾಮೆಡ್– ಕೆ ಪರವಾಗಿ ನೀತಿ ರೂಪಿಸುತ್ತಿರುವ ಕ್ರಮಗಳನ್ನು ಕೈಬಿಡಬೇಕು. ಸರ್ಕಾರ ವಿದ್ಯಾರ್ಥಿ ಪರ ನಿಲುವು ತಳೆಯಬೇಕು ಎಂದು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು.<br /> <br /> ಸರ್ಕಾರ ಬಡವರ ಪರವಾಗಿ ನೀತಿ ರೂಪಿಸಬೇಕು. ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯ ಅನುಷ್ಠಾನದಿಂದ ಖಾಸಗಿ ಶಾಲೆಗಳಿಗೆ ಅನುಕೂಲವಾಗಲಿದೆ. ಇದು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆ ಕಸಿಯುವ ಪ್ರಯತ್ನ ಎಂದು ಆರೋಪಿಸಿದರು.<br /> <br /> ಕಾಯ್ದೆಯ ಪ್ರಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಅಡಿ ಸೀಟ್ ಲಭ್ಯವಿರುವುದಿಲ್ಲ. ಲಕ್ಷಾಂತರ ರೂಪಾಯಿ ಕ್ಯಾಪಿಟೇಷನ್ ಶುಲ್ಕ ತೆರಲು ಸಾಮರ್ಥ್ಯ ಇಲ್ಲದ ಬಡವರು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.<br /> ಎಸ್ಎಫ್ಐ ಜಿಲ್ಲಾ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಮುಖಂಡರಾದ ಮಂಜುನಾಥ, ಶ್ರೀಧರ್, ಲಕ್ಷ್ಮೀ, ಭವ್ಯಾ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>