<p><strong>ಚಿಂತಾಮಣಿ</strong>: ಪಟ್ಟಣದಲ್ಲಿ ಡೆಂಗೆ ಮತ್ತು ಚಿಕನ್ಗುನ್ಯಾ ಜ್ವರಗಳಿಗೆ ಕಾರಣವಾಗುವ ಸೊಳ್ಳೆಗಳ ಬಗ್ಗೆ ಜನ ಜಾಗೃತಿ ಮೂಡಿಸುವುದು ಹಾಗೂ ಮನೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ನೀರಿನ ತೊಟ್ಟಿ ಮತ್ತು ಡ್ರಮ್ಗಳನ್ನು ಪರಿಶೀಲಿಸಲು ಸೋಮವಾರ ಪೌರಾಯುಕ್ತ ಡಾ.ರಾಮೇಗೌಡ ಮತ್ತು ಸಿಬ್ಬಂದಿ 1 ಮತ್ತು 3ನೇ ವಾರ್ಡ್ನ ಹಲವು ಮನೆಗಳಿಗೆ ಭೇಟಿ ನೀಡಿದರು.<br /> <br /> ಕೆಲವು ಮನೆಗಳಲ್ಲಿ ನೀರನ್ನು ಎರಡು ತಿಂಗಳವರೆಗೆ ಬದಲಿಸುವುದಿಲ್ಲ. ಸೊಳ್ಳೆಗಳ ಉತ್ಪತ್ತಿಗೆ ಇದು ಮುಖ್ಯ ಕಾರಣ. ಸೊಳ್ಳೆಗಳ ನಿಯಂತ್ರಣಕ್ಕೆ `ಅಬೇಕ್~ ಔಷಧಿ ಸಿಂಪಡಿಸಲಾಗಿದೆ ಎಂದು ಹೇಳಿದರು.<br /> <br /> ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮನೆಗಳ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವಾರಕ್ಕೆ ಒಮ್ಮೆಯಾದರೂ ಮನೆಯಲ್ಲಿರುವ ಎಲ್ಲ ನೀರಿನ ತೊಟ್ಟಿಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು ಎಂದು ಸಲಹೆ ನೀಡಿದರು.<br /> <br /> ನಗರಸಭೆ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಚೌಡರೆಡ್ಡಿ, ಸದಸ್ಯರಾದ ಭಾಸ್ಕರ್, ನಂಜಮ್ಮ, ದೇವರಾಜ್, ಸುರೇಶ್, ಶಬ್ಬೀರ್, ಆರೋಗ್ಯ ನಿರೀಕ್ಷಕರಾದ ಸಿ.ಕೆ.ಬಾಬು, ಆರತಿ, ಪ್ರದೀಪ್, ಪ್ರಸಾದ್, ವೆಂಕಟೇಶಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಪಟ್ಟಣದಲ್ಲಿ ಡೆಂಗೆ ಮತ್ತು ಚಿಕನ್ಗುನ್ಯಾ ಜ್ವರಗಳಿಗೆ ಕಾರಣವಾಗುವ ಸೊಳ್ಳೆಗಳ ಬಗ್ಗೆ ಜನ ಜಾಗೃತಿ ಮೂಡಿಸುವುದು ಹಾಗೂ ಮನೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ನೀರಿನ ತೊಟ್ಟಿ ಮತ್ತು ಡ್ರಮ್ಗಳನ್ನು ಪರಿಶೀಲಿಸಲು ಸೋಮವಾರ ಪೌರಾಯುಕ್ತ ಡಾ.ರಾಮೇಗೌಡ ಮತ್ತು ಸಿಬ್ಬಂದಿ 1 ಮತ್ತು 3ನೇ ವಾರ್ಡ್ನ ಹಲವು ಮನೆಗಳಿಗೆ ಭೇಟಿ ನೀಡಿದರು.<br /> <br /> ಕೆಲವು ಮನೆಗಳಲ್ಲಿ ನೀರನ್ನು ಎರಡು ತಿಂಗಳವರೆಗೆ ಬದಲಿಸುವುದಿಲ್ಲ. ಸೊಳ್ಳೆಗಳ ಉತ್ಪತ್ತಿಗೆ ಇದು ಮುಖ್ಯ ಕಾರಣ. ಸೊಳ್ಳೆಗಳ ನಿಯಂತ್ರಣಕ್ಕೆ `ಅಬೇಕ್~ ಔಷಧಿ ಸಿಂಪಡಿಸಲಾಗಿದೆ ಎಂದು ಹೇಳಿದರು.<br /> <br /> ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮನೆಗಳ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವಾರಕ್ಕೆ ಒಮ್ಮೆಯಾದರೂ ಮನೆಯಲ್ಲಿರುವ ಎಲ್ಲ ನೀರಿನ ತೊಟ್ಟಿಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು ಎಂದು ಸಲಹೆ ನೀಡಿದರು.<br /> <br /> ನಗರಸಭೆ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಚೌಡರೆಡ್ಡಿ, ಸದಸ್ಯರಾದ ಭಾಸ್ಕರ್, ನಂಜಮ್ಮ, ದೇವರಾಜ್, ಸುರೇಶ್, ಶಬ್ಬೀರ್, ಆರೋಗ್ಯ ನಿರೀಕ್ಷಕರಾದ ಸಿ.ಕೆ.ಬಾಬು, ಆರತಿ, ಪ್ರದೀಪ್, ಪ್ರಸಾದ್, ವೆಂಕಟೇಶಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>