<p><strong>ಬಾಗೇಪಲ್ಲಿ: </strong>'ಪಟ್ಟಣದ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿದ್ದು, ಕೊಳಚೆ ನೀರು ನಿಂತು ನಾರುತ್ತಿದೆ, ಚರಂಡಿಗಳ ಸುತ್ತಮುತ್ತಲಿನ ನಿವಾಸಿಗಳು ಅನಾರೋಗ್ಯ ಭೀತಿ ಎದುರಿಸುತ್ತಿದ್ದಾರೆ.</p>.<p>‘ಪಟ್ಟಣದ ಹೃದಯ ಭಾಗದಲ್ಲಿ ರಾಜಕಾಲುವೆ ಹಾದು ಹೋಗಿದೆ. ಈ ಕಾಲುವೆಯೂ ಸೇರಿದಂತೆ ಇತರ ರಸ್ತೆ ಬದಿ ಇರುವ ಚರಂಡಿಗಳು ಹೂಳು, ಕಸಕಡ್ಡಿ ತುಂಬಿವೆ. ಸೊಳ್ಳೆ ಕಾಟ ಹೆಚ್ಚಾಗಿದೆ. ಸ್ವಚ್ಛಗೊಳಿಸಿಲ್ಲ’ ಎಂದು ನಿವಾಸಿ ನಾರಾಯಣಸ್ವಾಮಿ ಸಮಸ್ಯೆ ವಿವರಿಸಿದರು.</p>.<p>ಪಟ್ಟಣದ ಡಾ.ಎಚ್.ಎನ್.ಪಾರ್ಕ್ ಬಳಿ, ಗೂಳೂರು ವೃತ್ತದಿಂದ ಕೊತ್ತಪಲ್ಲಿ, ನೇತಾಜಿ ವೃತ್ತದಿಂದ ಜಿಲಕರಪಲ್ಲಿ, ಕುಂಬಾರಪೇಟೆ, ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್, ರಾಘವೇಂದ್ರ ಚಲನಚಿತ್ರಮಂದಿರದ ಹತ್ತಿರವೂ ಇದೇ ರೀತಿಯ ಸಮಸ್ಯೆ ಕಾಣಬಹುದಾಗಿದೆ.</p>.<p>ರಾಜಕಾಲುವೆಯ ಗೋಳು: ಐದಾರು ವರ್ಷಗಳಿಂದ ಮಂದಗತಿಯಲ್ಲಿ ರಾಜಕಾಲುವೆಯ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಅನುದಾನದ ಕೊರತೆ ನೆಪವೊಡ್ಡಿ ಕಾಯಕಲ್ಪವೂ ದೊರೆಯದಂತಾಗಿದೆ.</p>.<p>ಶೀಘ್ರ ಕ್ರಮ: 'ಒಂದು ವಾರದೊಳಗೆ ರಾಜಕಾಲುವೆ ದುರಸ್ತಿ ಬಗ್ಗೆ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳಲಾಗುವುದು' ಎಂದು ಪುರಸಭೆ ಅಧ್ಯಕ್ಷೆ ಮಮತಾ ನಾಗರಾಜರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ: </strong>'ಪಟ್ಟಣದ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿದ್ದು, ಕೊಳಚೆ ನೀರು ನಿಂತು ನಾರುತ್ತಿದೆ, ಚರಂಡಿಗಳ ಸುತ್ತಮುತ್ತಲಿನ ನಿವಾಸಿಗಳು ಅನಾರೋಗ್ಯ ಭೀತಿ ಎದುರಿಸುತ್ತಿದ್ದಾರೆ.</p>.<p>‘ಪಟ್ಟಣದ ಹೃದಯ ಭಾಗದಲ್ಲಿ ರಾಜಕಾಲುವೆ ಹಾದು ಹೋಗಿದೆ. ಈ ಕಾಲುವೆಯೂ ಸೇರಿದಂತೆ ಇತರ ರಸ್ತೆ ಬದಿ ಇರುವ ಚರಂಡಿಗಳು ಹೂಳು, ಕಸಕಡ್ಡಿ ತುಂಬಿವೆ. ಸೊಳ್ಳೆ ಕಾಟ ಹೆಚ್ಚಾಗಿದೆ. ಸ್ವಚ್ಛಗೊಳಿಸಿಲ್ಲ’ ಎಂದು ನಿವಾಸಿ ನಾರಾಯಣಸ್ವಾಮಿ ಸಮಸ್ಯೆ ವಿವರಿಸಿದರು.</p>.<p>ಪಟ್ಟಣದ ಡಾ.ಎಚ್.ಎನ್.ಪಾರ್ಕ್ ಬಳಿ, ಗೂಳೂರು ವೃತ್ತದಿಂದ ಕೊತ್ತಪಲ್ಲಿ, ನೇತಾಜಿ ವೃತ್ತದಿಂದ ಜಿಲಕರಪಲ್ಲಿ, ಕುಂಬಾರಪೇಟೆ, ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್, ರಾಘವೇಂದ್ರ ಚಲನಚಿತ್ರಮಂದಿರದ ಹತ್ತಿರವೂ ಇದೇ ರೀತಿಯ ಸಮಸ್ಯೆ ಕಾಣಬಹುದಾಗಿದೆ.</p>.<p>ರಾಜಕಾಲುವೆಯ ಗೋಳು: ಐದಾರು ವರ್ಷಗಳಿಂದ ಮಂದಗತಿಯಲ್ಲಿ ರಾಜಕಾಲುವೆಯ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಅನುದಾನದ ಕೊರತೆ ನೆಪವೊಡ್ಡಿ ಕಾಯಕಲ್ಪವೂ ದೊರೆಯದಂತಾಗಿದೆ.</p>.<p>ಶೀಘ್ರ ಕ್ರಮ: 'ಒಂದು ವಾರದೊಳಗೆ ರಾಜಕಾಲುವೆ ದುರಸ್ತಿ ಬಗ್ಗೆ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳಲಾಗುವುದು' ಎಂದು ಪುರಸಭೆ ಅಧ್ಯಕ್ಷೆ ಮಮತಾ ನಾಗರಾಜರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>