<p>ಶಿಡ್ಲಘಟ್ಟ: ಸತತ ಆರು ಬಾರಿ ಗೆದ್ದು ಎರಡು ಬಾರಿ ಕೇಂದ್ರದಲ್ಲಿ ಸಚಿವರಾಗಿರುವ ಕೆ.ಎಚ್.ಮುನಿಯಪ್ಪ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಬಂಗಾರಪೇಟೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಹೇಳಿದರು.<br /> <br /> ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯಸ್ವಾಮಿ ದೇಗುಲದಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷ ಕ್ಷೇತ್ರದತ್ತ ಮುಖ ಮಾಡದವರಿಗೆ ಚುನಾವಣೆ ಸಮೀಪವಿದ್ದಾಗ ಮಾತ್ರ ಮತದಾರರು ನೆನಪಾಗುತ್ತಾರೆ ಎಂದು ವ್ಯಂಗ್ಯವಾಡಿದರು.<br /> <br /> ರಾಜ್ಯ, ಕೇಂದ್ರದ ಬಜೆಟ್ ಮಂಡನೆ ಮುಗಿದಿದೆ. ಇದೀಗ ನೀರಾವರಿ ಯೋಜನೆ ಬಗ್ಗೆ ಪ್ರಸ್ತಾಪಿಸಿದರೆ ಏನು ಪ್ರಯೋಜನ? ಬಜೆಟ್ ಮಂಡನೆಗೂ ಮುನ್ನ ನೀರಾವರಿ ಯೋಜನೆ ಪ್ರಸ್ತಾಪಿಸಿ ಅದನ್ನು ಬಜೆಟ್ನಲ್ಲಿ ಬರುವಂತೆ ನೋಡಿಕೊಳ್ಳಬೇಕಿತ್ತಲ್ಲವೆ ಎಂದು ಟೀಕಿಸಿದರು.<br /> <br /> ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿ ಶ್ರೀಧರ್, ಮುಖಂಡರಾದ ಹನುಮಪ್ಪ, ಜೆ.ವಿ.ಸದಾಶಿವ, ಶ್ರೀರಾಮರೆಡ್ಡಿ, ಲೊಕೇಶ್, ಮುನಿವೆಂಕಟಪ್ಪ, ದಾಮೋದರ್ ಮತ್ತಿತರರು ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ಸತತ ಆರು ಬಾರಿ ಗೆದ್ದು ಎರಡು ಬಾರಿ ಕೇಂದ್ರದಲ್ಲಿ ಸಚಿವರಾಗಿರುವ ಕೆ.ಎಚ್.ಮುನಿಯಪ್ಪ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಬಂಗಾರಪೇಟೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಹೇಳಿದರು.<br /> <br /> ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯಸ್ವಾಮಿ ದೇಗುಲದಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷ ಕ್ಷೇತ್ರದತ್ತ ಮುಖ ಮಾಡದವರಿಗೆ ಚುನಾವಣೆ ಸಮೀಪವಿದ್ದಾಗ ಮಾತ್ರ ಮತದಾರರು ನೆನಪಾಗುತ್ತಾರೆ ಎಂದು ವ್ಯಂಗ್ಯವಾಡಿದರು.<br /> <br /> ರಾಜ್ಯ, ಕೇಂದ್ರದ ಬಜೆಟ್ ಮಂಡನೆ ಮುಗಿದಿದೆ. ಇದೀಗ ನೀರಾವರಿ ಯೋಜನೆ ಬಗ್ಗೆ ಪ್ರಸ್ತಾಪಿಸಿದರೆ ಏನು ಪ್ರಯೋಜನ? ಬಜೆಟ್ ಮಂಡನೆಗೂ ಮುನ್ನ ನೀರಾವರಿ ಯೋಜನೆ ಪ್ರಸ್ತಾಪಿಸಿ ಅದನ್ನು ಬಜೆಟ್ನಲ್ಲಿ ಬರುವಂತೆ ನೋಡಿಕೊಳ್ಳಬೇಕಿತ್ತಲ್ಲವೆ ಎಂದು ಟೀಕಿಸಿದರು.<br /> <br /> ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿ ಶ್ರೀಧರ್, ಮುಖಂಡರಾದ ಹನುಮಪ್ಪ, ಜೆ.ವಿ.ಸದಾಶಿವ, ಶ್ರೀರಾಮರೆಡ್ಡಿ, ಲೊಕೇಶ್, ಮುನಿವೆಂಕಟಪ್ಪ, ದಾಮೋದರ್ ಮತ್ತಿತರರು ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>