<p><strong>ಉಜಿರೆ (ದಕ್ಷಿಣ ಕನ್ನಡ):</strong> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 2024–25ನೇ ಸಾಲಿನಲ್ಲಿ ರಾಜ್ಯದ 160 ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ತಿಳಿಸಿದ್ದಾರೆ.</p>.<p>ಇದುವರೆಗೆ ಒಟ್ಟು 889 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದಕ್ಕಾಗಿ ಧರ್ಮಸ್ಥಳದಿಂದ ₹60.05 ಕೋಟಿ ವಿನಿಯೋಗಿಸಲಾಗಿದೆ. ಇದರಿಂದ 4.05 ಲಕ್ಷ ಕುಟುಂಬಗಳು ಪ್ರಯೋಜನ ಪಡೆದಿವೆ. 2.58 ಲಕ್ಷ ಎಕರೆ ಪ್ರದೇಶದಲ್ಲಿ ಕೃಷಿ ಮಾಡಲಾಗಿದೆ. 530 ಕೋಟಿ ಗ್ಯಾಲನ್ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದೆ. ಸದ್ಯದಲ್ಲೇ ಪುನರುಜ್ಜೀವನಗೊಂಡ ಕೆರೆಗಳ ಸಂಖ್ಯೆ 1 ಸಾವಿರ ದಾಟಲಿದೆ ಎಂದು ಅವರು ಹೇಳಿದ್ದಾರೆ.</p>.<p>ಕೆರೆಗಳ ಪುನರುಜ್ಜೀವನಕ್ಕಾಗಿ 1,760 ಕೃಷಿಕರನ್ನು ಒಳಗೊಂಡ 160 ಕೆರೆ ಸಮಿತಿಗಳನ್ನು ರಚಿಸಲಾಗಿದೆ. 160 ನೋಡಲ್ ಅಧಿಕಾರಿಗಳು ಹಾಗೂ 7 ಮಂದಿ ಎಂಜಿನಿಯರ್ಗಳು ಕಾರ್ಯನಿರ್ವಹಿಸಿದ್ದಾರೆ. 12.50 ಲಕ್ಷ ಲೋಡ್ನಷ್ಟು ಕೆರೆಯ ಹೂಳನ್ನು ರೈತರು ತಮ್ಮ ಜಮೀನಿಗೆ ಬಳಸಿಕೊಂಡಿದ್ದಾರೆ. ಪುನರುಜ್ಜೀವನಗೊಂಡ ಕೆರೆಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಕೆರೆ ಸಮಿತಿಗೆ ನಿರ್ವಹಣೆಗಾಗಿ ಹಸ್ತಾಂತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ವನ್ಯಜೀವಿಗಳಿಗಾಗಿ ಕೆರೆ ನಿರ್ಮಾಣ: ಶಿವಮೊಗ್ಗದ ತಾವರೆಕೆರೆ ಹುಲಿ ಮತ್ತು ಸಿಂಹಧಾಮದಲ್ಲಿ 10 ಕೆರೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಒಂದು ಕೆರೆಯನ್ನು ವನ್ಯಜೀವಿಗಳಿಗಾಗಿ ಪುನಶ್ಚೇತನಗೊಳಿಸಲಾಗಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 2016ರಿಂದ ಕೆರೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯ ನಡೆಯುತ್ತಿದೆ. ಕೆರೆಗಳಲ್ಲಿ ಹೂಳು ತುಂಬಿ ಮತ್ತೆ ಕೆರೆಗಳು ಹಾಳಾಗದಂತೆ ರಕ್ಷಿಸಿಕೊಳ್ಳಬೇಕು. ಜಲಮೂಲ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಕಾರವೂ ಶ್ಲಾಘನೀಯ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ (ದಕ್ಷಿಣ ಕನ್ನಡ):</strong> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 2024–25ನೇ ಸಾಲಿನಲ್ಲಿ ರಾಜ್ಯದ 160 ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ತಿಳಿಸಿದ್ದಾರೆ.</p>.<p>ಇದುವರೆಗೆ ಒಟ್ಟು 889 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದಕ್ಕಾಗಿ ಧರ್ಮಸ್ಥಳದಿಂದ ₹60.05 ಕೋಟಿ ವಿನಿಯೋಗಿಸಲಾಗಿದೆ. ಇದರಿಂದ 4.05 ಲಕ್ಷ ಕುಟುಂಬಗಳು ಪ್ರಯೋಜನ ಪಡೆದಿವೆ. 2.58 ಲಕ್ಷ ಎಕರೆ ಪ್ರದೇಶದಲ್ಲಿ ಕೃಷಿ ಮಾಡಲಾಗಿದೆ. 530 ಕೋಟಿ ಗ್ಯಾಲನ್ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದೆ. ಸದ್ಯದಲ್ಲೇ ಪುನರುಜ್ಜೀವನಗೊಂಡ ಕೆರೆಗಳ ಸಂಖ್ಯೆ 1 ಸಾವಿರ ದಾಟಲಿದೆ ಎಂದು ಅವರು ಹೇಳಿದ್ದಾರೆ.</p>.<p>ಕೆರೆಗಳ ಪುನರುಜ್ಜೀವನಕ್ಕಾಗಿ 1,760 ಕೃಷಿಕರನ್ನು ಒಳಗೊಂಡ 160 ಕೆರೆ ಸಮಿತಿಗಳನ್ನು ರಚಿಸಲಾಗಿದೆ. 160 ನೋಡಲ್ ಅಧಿಕಾರಿಗಳು ಹಾಗೂ 7 ಮಂದಿ ಎಂಜಿನಿಯರ್ಗಳು ಕಾರ್ಯನಿರ್ವಹಿಸಿದ್ದಾರೆ. 12.50 ಲಕ್ಷ ಲೋಡ್ನಷ್ಟು ಕೆರೆಯ ಹೂಳನ್ನು ರೈತರು ತಮ್ಮ ಜಮೀನಿಗೆ ಬಳಸಿಕೊಂಡಿದ್ದಾರೆ. ಪುನರುಜ್ಜೀವನಗೊಂಡ ಕೆರೆಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಕೆರೆ ಸಮಿತಿಗೆ ನಿರ್ವಹಣೆಗಾಗಿ ಹಸ್ತಾಂತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ವನ್ಯಜೀವಿಗಳಿಗಾಗಿ ಕೆರೆ ನಿರ್ಮಾಣ: ಶಿವಮೊಗ್ಗದ ತಾವರೆಕೆರೆ ಹುಲಿ ಮತ್ತು ಸಿಂಹಧಾಮದಲ್ಲಿ 10 ಕೆರೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಒಂದು ಕೆರೆಯನ್ನು ವನ್ಯಜೀವಿಗಳಿಗಾಗಿ ಪುನಶ್ಚೇತನಗೊಳಿಸಲಾಗಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 2016ರಿಂದ ಕೆರೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯ ನಡೆಯುತ್ತಿದೆ. ಕೆರೆಗಳಲ್ಲಿ ಹೂಳು ತುಂಬಿ ಮತ್ತೆ ಕೆರೆಗಳು ಹಾಳಾಗದಂತೆ ರಕ್ಷಿಸಿಕೊಳ್ಳಬೇಕು. ಜಲಮೂಲ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಕಾರವೂ ಶ್ಲಾಘನೀಯ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>