ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ ಪುತ್ರಿ ಪಿ.ಕೆ.ಗಾನವಿ ಅವರು ಶುಶ್ರೂಷಕಿ ತರಬೇತಿ ಪಡೆದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವಾಗ ಕುಸಿದು ಬಿದ್ದು 2022ರ ಫೆಬ್ರುವರಿ 8ರಂದು ಮೃತಪಟ್ಟಿದ್ದರು. ಕುಟುಂಬದವರು ಅವರ ಅಂಗಾಗ ದಾನ ಮಾಡಿದ್ದರು. ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕೆಂದು ಶಾಸಕ ಟಿ.ಡಿ.ರಾಜೇಗೌಡ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಕೂಡಲೇ ₹ 3 ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದರೂ ಪರಿಹಾರ ನೀಡಿರಲಿಲ್ಲ.