<p><strong>ಚಿಕ್ಕಮಗಳೂರು:</strong> ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆನಂದ ಎಂಬಾತನಿಗೆ ಮೂರು ವರ್ಷ ಜೈಲು, ₹ 20 ಸಾವಿರ ದಂಡವನ್ನು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದೆ.</p>.<p>ನ್ಯಾಯಾಧೀಶರಾದ ವಿನುತಾ ಪಿ.ಶೆಟ್ಟಿ ಈ ಆದೇಶ ನೀಡಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ₹ 20 ಸಾವಿರ ಪರಿಹಾರವನ್ನು ಜಿಲ್ಲಾ ಕಾನೂನು ಪ್ರಾಧಿಕಾರದಿಂದ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಏನಿದು ಪ್ರಕರಣ: ಕಳೆದ ವರ್ಷ ಜೂನ್ 17ರಂದು ಪ್ರಕರಣ ನಡೆದಿತ್ತು. ಕೊಪ್ಪ ತಾಲ್ಲೂಕಿನ ಕಳಸಾಪುರ ಬಳಿಯ ಕಾಫಿ ತೋಟದಲ್ಲಿ 17 ವರ್ಷದ ಬಾಲಕಿ, ಬಾಲಕಿಯ ತಾಯಿ, ತಾಯಿಯ ಸಹೋದರ ಆನಂದ ವಾಸವಾಗಿದ್ದರು.</p>.<p>ಆನಂದ ಬಾಲಕಿಗೆ ಥಳಿಸಿ ಬಲತ್ಕಾರ ಮಾಡಿದ್ದಾನೆ ಎಂದು ತಾಯಿ ಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಪೊಲೀಸ್ ಇನ್ಸ್ಪೆಕ್ಟರ್ ಎನ್.ಎನ್.ರವಿ ಪ್ರಕರಣದ ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೊಕ್ಸೊ ಕೋರ್ಟ್ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಬಿ.ಎಚ್. ಶ್ರೀಹರ್ಷ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆನಂದ ಎಂಬಾತನಿಗೆ ಮೂರು ವರ್ಷ ಜೈಲು, ₹ 20 ಸಾವಿರ ದಂಡವನ್ನು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದೆ.</p>.<p>ನ್ಯಾಯಾಧೀಶರಾದ ವಿನುತಾ ಪಿ.ಶೆಟ್ಟಿ ಈ ಆದೇಶ ನೀಡಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ₹ 20 ಸಾವಿರ ಪರಿಹಾರವನ್ನು ಜಿಲ್ಲಾ ಕಾನೂನು ಪ್ರಾಧಿಕಾರದಿಂದ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಏನಿದು ಪ್ರಕರಣ: ಕಳೆದ ವರ್ಷ ಜೂನ್ 17ರಂದು ಪ್ರಕರಣ ನಡೆದಿತ್ತು. ಕೊಪ್ಪ ತಾಲ್ಲೂಕಿನ ಕಳಸಾಪುರ ಬಳಿಯ ಕಾಫಿ ತೋಟದಲ್ಲಿ 17 ವರ್ಷದ ಬಾಲಕಿ, ಬಾಲಕಿಯ ತಾಯಿ, ತಾಯಿಯ ಸಹೋದರ ಆನಂದ ವಾಸವಾಗಿದ್ದರು.</p>.<p>ಆನಂದ ಬಾಲಕಿಗೆ ಥಳಿಸಿ ಬಲತ್ಕಾರ ಮಾಡಿದ್ದಾನೆ ಎಂದು ತಾಯಿ ಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಪೊಲೀಸ್ ಇನ್ಸ್ಪೆಕ್ಟರ್ ಎನ್.ಎನ್.ರವಿ ಪ್ರಕರಣದ ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೊಕ್ಸೊ ಕೋರ್ಟ್ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಬಿ.ಎಚ್. ಶ್ರೀಹರ್ಷ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>