<p><strong>ಪುತ್ತೂರು</strong>: ಇಲ್ಲಿನ ಹೊರವಲಯದ ಸೇಡಿಯಾಪು ಜಾಗದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬಳಿಯೇ 300 ಹಾಸಿಗೆಗಳ ನೂತನ ಆಸ್ಪತ್ರೆಯೂ ನಿರ್ಮಾಣವಾಗಲಿದೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಈಗಿರುವ ಸರ್ಕಾರಿ ಆಸ್ಪತ್ರೆಯ ಜಾಗದಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದೆಲ್ಲ ಗೊತ್ತಿದ್ದೂ ಬಿಜೆಪಿಗರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆಗುವುದಿಲ್ಲ ಎಂದು ಈ ಹಿಂದೆ ಹೇಳುತ್ತಿದ್ದ ಬಿಜೆಪಿಗರು, ಇದೀಗ ಪ್ರಸ್ತಾವಿತ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟಿರುವ ಜಾಗದಲ್ಲಿ ನಿರ್ಮಿಸುವ ಬದಲಿಗೆ ಸರ್ಕಾರಿ ಆಸ್ಪತ್ರೆ ಇರುವ ಜಾಗದಲ್ಲಿಯೇ ನಿರ್ಮಿಸಬೇಕು ಎಂದು ಹೇಳುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ವ್ಯಂಗ್ಯವಾಡಿದರು.</p>.<p>ಮಡಿಕೇರಿಯಲ್ಲಿ ಆಸ್ಪತ್ರೆ ಒಂದೆಡೆ ಮತ್ತು ಮೆಡಿಕಲ್ ಕಾಲೇಜು ಇನ್ನೊಂದೆಡೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದನ್ನು ಮನಗಂಡು ಪುತ್ತೂರಿನಲ್ಲಿ ಆ ಸಮಸ್ಯೆ ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಶಾಸಕರು ಈ ಕ್ರಮ ಕೈಗೊಂಡಿದ್ದಾರೆ. ಸೇಡಿಯಾಪು ಪ್ರದೇಶಕ್ಕೆ ಹೋಗಲು ಕಷ್ಟವೇನೂ ಇಲ್ಲ. ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆಯಿದೆ. ಮೂಲ ಸೌಕರ್ಯ ಒದಗಿಸಲಾಗುತ್ತದೆ. ಬಿಜೆಪಿಯ ಕೇವಲ ನಾಲ್ಕೈದು ಮಂದಿ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.</p>.<p>ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಕುಮ್ಮಕ್ಕು ನೀಡಿ ಪಕ್ಕದಲ್ಲಿನ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದ ಬಿಜೆಪಿಗರು, ಅಲ್ಲಿನ ಪ್ರಾಂಶುಪಾಲರು ಅಮಾನತಿಗೆ ಕಾರಣರಾಗಿದ್ದಾರೆ. ಅಂತಹವರು ಇದೀಗ ಆಸ್ಪತ್ರೆ ಇಲ್ಲೇ ಆಗಬೇಕು ಎಂಬ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.</p>.<p>ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಪುಡಾ ಸದಸ್ಯ ಲ್ಯಾನ್ಸಿ ಮಸ್ಕರೇನ್ಹಸ್, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ ಪ್ರಮುಖ ಸುಪ್ರೀತ್ ಕಣ್ಣಾರಾಯ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನು ಬಪ್ಪಳಿಗೆ, ಗಂಗಾಧರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಇಲ್ಲಿನ ಹೊರವಲಯದ ಸೇಡಿಯಾಪು ಜಾಗದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬಳಿಯೇ 300 ಹಾಸಿಗೆಗಳ ನೂತನ ಆಸ್ಪತ್ರೆಯೂ ನಿರ್ಮಾಣವಾಗಲಿದೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಈಗಿರುವ ಸರ್ಕಾರಿ ಆಸ್ಪತ್ರೆಯ ಜಾಗದಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದೆಲ್ಲ ಗೊತ್ತಿದ್ದೂ ಬಿಜೆಪಿಗರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆಗುವುದಿಲ್ಲ ಎಂದು ಈ ಹಿಂದೆ ಹೇಳುತ್ತಿದ್ದ ಬಿಜೆಪಿಗರು, ಇದೀಗ ಪ್ರಸ್ತಾವಿತ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟಿರುವ ಜಾಗದಲ್ಲಿ ನಿರ್ಮಿಸುವ ಬದಲಿಗೆ ಸರ್ಕಾರಿ ಆಸ್ಪತ್ರೆ ಇರುವ ಜಾಗದಲ್ಲಿಯೇ ನಿರ್ಮಿಸಬೇಕು ಎಂದು ಹೇಳುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ವ್ಯಂಗ್ಯವಾಡಿದರು.</p>.<p>ಮಡಿಕೇರಿಯಲ್ಲಿ ಆಸ್ಪತ್ರೆ ಒಂದೆಡೆ ಮತ್ತು ಮೆಡಿಕಲ್ ಕಾಲೇಜು ಇನ್ನೊಂದೆಡೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದನ್ನು ಮನಗಂಡು ಪುತ್ತೂರಿನಲ್ಲಿ ಆ ಸಮಸ್ಯೆ ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಶಾಸಕರು ಈ ಕ್ರಮ ಕೈಗೊಂಡಿದ್ದಾರೆ. ಸೇಡಿಯಾಪು ಪ್ರದೇಶಕ್ಕೆ ಹೋಗಲು ಕಷ್ಟವೇನೂ ಇಲ್ಲ. ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆಯಿದೆ. ಮೂಲ ಸೌಕರ್ಯ ಒದಗಿಸಲಾಗುತ್ತದೆ. ಬಿಜೆಪಿಯ ಕೇವಲ ನಾಲ್ಕೈದು ಮಂದಿ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.</p>.<p>ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಕುಮ್ಮಕ್ಕು ನೀಡಿ ಪಕ್ಕದಲ್ಲಿನ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದ ಬಿಜೆಪಿಗರು, ಅಲ್ಲಿನ ಪ್ರಾಂಶುಪಾಲರು ಅಮಾನತಿಗೆ ಕಾರಣರಾಗಿದ್ದಾರೆ. ಅಂತಹವರು ಇದೀಗ ಆಸ್ಪತ್ರೆ ಇಲ್ಲೇ ಆಗಬೇಕು ಎಂಬ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.</p>.<p>ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಪುಡಾ ಸದಸ್ಯ ಲ್ಯಾನ್ಸಿ ಮಸ್ಕರೇನ್ಹಸ್, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ ಪ್ರಮುಖ ಸುಪ್ರೀತ್ ಕಣ್ಣಾರಾಯ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನು ಬಪ್ಪಳಿಗೆ, ಗಂಗಾಧರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>