ನಂತರ ಮಾತನಾಡಿದ ಆರ್.ಬಿ. ಬಸವರಾಜ್, ‘ಈ ಮಾಲೆ ನಿರ್ಮಾಣಕ್ಕೆ ನೇಪಾಳದಿಂದ ರುದ್ರಾಕ್ಷಿ ತರಿಸಲಾಗಿದೆ. 30 ಜನರ ತಂಡವು 15 ದಿನಗಳ ಕಾಲ ಶ್ರಮಿಸಿದ್ದು, 50,108 ಪಂಚಮುಖಿ ರುದ್ರಾಕ್ಷಿಗಳಿಂದ ಮಾಲೆ ಮಾಡಲಾಗಿದೆ. ಸುಮಾರು 300 ಕೆಜಿ ತೂಕ ಇದೆ. ರುದ್ರಾಕ್ಷಿಯನ್ನು ಪೋಣಿಸಲು 50 ಕೆ.ಜಿ ಹಿತ್ತಾಳೆ ತಂತಿ ಬಳಸಲಾಗಿದ್ದು, ನಡುವೆ 5 ಸಾವಿರ ಕ್ರಿಸ್ಟಲ್ ಬಾಲ್ ಅಳವಡಿಸಲಾಗಿದೆ’ ಎಂದು ಅವರು ಹೇಳಿದರು.