<p><strong>ಚಿಕ್ಕಮಗಳೂರು:</strong> ಭದ್ರಾ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮುತ್ತೋಡಿ ಅರಣ್ಯದಲ್ಲಿ ಒತ್ತುವರಿ ಮಾಡಿದ್ದ 43 ಎಕರೆ ಜಾಗವನ್ನು ಅರಣ್ಯ ಇಲಾಖೆ ತೆರವುಗೊಳಿಸಿ ವಶಕ್ಕೆ ಪಡೆದಿದೆ.</p>.<p>ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿರುವ ಬಗ್ಗೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಅರಣ್ಯ ಇಲಾಖೆ ಮೊಕದ್ದಮೆ ದಾಖಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಷ್ಟೂ ಜಾಗದ ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆಯಲು ಏ.28ರಂದು ಆದೇಶ ನೀಡಿತ್ತು.</p>.<p>ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಕಾರಿ ಯಶಪಾಲ್ ಕ್ಷೀರಸಾಗರ ಮಾರ್ಗದರ್ಶನದಲ್ಲಿ 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಮೂರು ದಿನ ನಿರಂತರ ಕಾರ್ಯಾಚರಣೆ ನಡೆಸಿ, ಒತ್ತುವರಿ ಜಾಗದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ತೆರವುಗೊಳಿಸಿದರು.</p>.<p>ಭದ್ರಾ ಹುಲಿ ಸಂರಕ್ಷಿತ ಯೋಜನೆಯ ಉಪಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರಸ್ವಾಮಿ, ವಲಯ ಅರಣ್ಯಾಧಿಕಾರಿ ಜಗದೀಶ್ ಮೇದ, ಗೌರವ್, ಸುಧಾಕರ ಕಾರ್ಯಚರಣೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಭದ್ರಾ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮುತ್ತೋಡಿ ಅರಣ್ಯದಲ್ಲಿ ಒತ್ತುವರಿ ಮಾಡಿದ್ದ 43 ಎಕರೆ ಜಾಗವನ್ನು ಅರಣ್ಯ ಇಲಾಖೆ ತೆರವುಗೊಳಿಸಿ ವಶಕ್ಕೆ ಪಡೆದಿದೆ.</p>.<p>ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿರುವ ಬಗ್ಗೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಅರಣ್ಯ ಇಲಾಖೆ ಮೊಕದ್ದಮೆ ದಾಖಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಷ್ಟೂ ಜಾಗದ ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆಯಲು ಏ.28ರಂದು ಆದೇಶ ನೀಡಿತ್ತು.</p>.<p>ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಕಾರಿ ಯಶಪಾಲ್ ಕ್ಷೀರಸಾಗರ ಮಾರ್ಗದರ್ಶನದಲ್ಲಿ 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಮೂರು ದಿನ ನಿರಂತರ ಕಾರ್ಯಾಚರಣೆ ನಡೆಸಿ, ಒತ್ತುವರಿ ಜಾಗದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ತೆರವುಗೊಳಿಸಿದರು.</p>.<p>ಭದ್ರಾ ಹುಲಿ ಸಂರಕ್ಷಿತ ಯೋಜನೆಯ ಉಪಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರಸ್ವಾಮಿ, ವಲಯ ಅರಣ್ಯಾಧಿಕಾರಿ ಜಗದೀಶ್ ಮೇದ, ಗೌರವ್, ಸುಧಾಕರ ಕಾರ್ಯಚರಣೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>