<p><strong>ಕಡೂರು</strong>: ಅನಸೂಯಾ ಜಯಂತಿಗೆ ಕಡೂರಿನಿಂದ 2 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿರುವುದು ಧರ್ಮಜಾಗೃತಿ ಬಲಗೊಳ್ಳುತ್ತಿರುವ ಸಂಕೇತ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.</p>.<p>ಗುರುವಾರ ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಡೂರು- ಬೀರೂರು ಪಟ್ಟಣ ಹಾಗೂ ಗ್ರಾಮೀಣ ಭಾಗದ ಮಹಿಳೆಯರು ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಸ್ವಪ್ರೇರಣೆಯಿಂದ ಅನಸೂಯಾ ಜಯಂತಿಯಲ್ಲಿ ಭಾಗವಹಿಸಲು ಭಕ್ತಿಯಿಂದ ತೆರಳಿದ್ದಾರೆ. ಅವರಿಗೆ ವಾಹನ ವ್ಯವಸ್ಥೆ ಕಲ್ಪಿಸಲಾಗಿತ್ತು. ಶನಿವಾರ ದತ್ತಪೀಠದಲ್ಲಿ ನಡೆಯಲಿರುವ ದತ್ತ ಜಯಂತಿಗೆ ಕಡೂರಿನಿಂದ 5 ಸಾವಿರಕ್ಕೂ ಹೆಚ್ಚು ದತ್ತ ಮಾಲಾಧಾರಿಗಳು ಭಾಗವಹಿಸಲಿದ್ದಾರೆ’ ಎಂದರು.</p>.<p>ದತ್ತ ಮಾಲಾ ಅಭಿಯಾನದ ಜಿಲ್ಲಾ ಪ್ರಮುಖ್ ಕಡೂರು ಎ.ಮಣಿ ಮಾತನಾಡಿ, ‘ದತ್ತಪೀಠವು ಕರ್ನಾಟಕದ ಅಯೋಧ್ಯೆಯಾಗಬೇಕೆಂಬ ಆಶಯ ನಮ್ಮೆಲ್ಲರದ್ದು. ಸರ್ಕಾರ ದತ್ತ ಪಾದುಕೆಗಳಿಗೆ ನಿತ್ಯಪೂಜೆಗೆ ಅವಕಾಶ ನೀಡಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ದೇವಾನಂದ್, ಮುಖಂಡರಾದ ಮಲ್ಲಿಕಾರ್ಜುನ್(ಮಲ್ಲು), ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾವೇರಿ ಲಕ್ಕಪ್ಪ, ವನಮಾಲ ದೇವರಾಜ್, ಪುರಸಭೆ ಉಪಾಧ್ಯಕ್ಷೆ ಮಂಜುಳಾ ಚಂದ್ರು, ಸಿದ್ದಪ್ಪ, ಶಾಮಿಯಾನ ಚಂದ್ರು, ಕುರುಬಗೆರೆ ಮಹೇಶ್, ಬಳ್ಳೇಕೆರೆ ಶಶಿ, ಹುಲ್ಲೇಹಳ್ಳಿ ಲಕ್ಷ್ಮಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ಅನಸೂಯಾ ಜಯಂತಿಗೆ ಕಡೂರಿನಿಂದ 2 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿರುವುದು ಧರ್ಮಜಾಗೃತಿ ಬಲಗೊಳ್ಳುತ್ತಿರುವ ಸಂಕೇತ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.</p>.<p>ಗುರುವಾರ ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಡೂರು- ಬೀರೂರು ಪಟ್ಟಣ ಹಾಗೂ ಗ್ರಾಮೀಣ ಭಾಗದ ಮಹಿಳೆಯರು ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಸ್ವಪ್ರೇರಣೆಯಿಂದ ಅನಸೂಯಾ ಜಯಂತಿಯಲ್ಲಿ ಭಾಗವಹಿಸಲು ಭಕ್ತಿಯಿಂದ ತೆರಳಿದ್ದಾರೆ. ಅವರಿಗೆ ವಾಹನ ವ್ಯವಸ್ಥೆ ಕಲ್ಪಿಸಲಾಗಿತ್ತು. ಶನಿವಾರ ದತ್ತಪೀಠದಲ್ಲಿ ನಡೆಯಲಿರುವ ದತ್ತ ಜಯಂತಿಗೆ ಕಡೂರಿನಿಂದ 5 ಸಾವಿರಕ್ಕೂ ಹೆಚ್ಚು ದತ್ತ ಮಾಲಾಧಾರಿಗಳು ಭಾಗವಹಿಸಲಿದ್ದಾರೆ’ ಎಂದರು.</p>.<p>ದತ್ತ ಮಾಲಾ ಅಭಿಯಾನದ ಜಿಲ್ಲಾ ಪ್ರಮುಖ್ ಕಡೂರು ಎ.ಮಣಿ ಮಾತನಾಡಿ, ‘ದತ್ತಪೀಠವು ಕರ್ನಾಟಕದ ಅಯೋಧ್ಯೆಯಾಗಬೇಕೆಂಬ ಆಶಯ ನಮ್ಮೆಲ್ಲರದ್ದು. ಸರ್ಕಾರ ದತ್ತ ಪಾದುಕೆಗಳಿಗೆ ನಿತ್ಯಪೂಜೆಗೆ ಅವಕಾಶ ನೀಡಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ದೇವಾನಂದ್, ಮುಖಂಡರಾದ ಮಲ್ಲಿಕಾರ್ಜುನ್(ಮಲ್ಲು), ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾವೇರಿ ಲಕ್ಕಪ್ಪ, ವನಮಾಲ ದೇವರಾಜ್, ಪುರಸಭೆ ಉಪಾಧ್ಯಕ್ಷೆ ಮಂಜುಳಾ ಚಂದ್ರು, ಸಿದ್ದಪ್ಪ, ಶಾಮಿಯಾನ ಚಂದ್ರು, ಕುರುಬಗೆರೆ ಮಹೇಶ್, ಬಳ್ಳೇಕೆರೆ ಶಶಿ, ಹುಲ್ಲೇಹಳ್ಳಿ ಲಕ್ಷ್ಮಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>