<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಬಾಳೂರು ಮೀಸಲು ಅರಣ್ಯದಲ್ಲಿ ‘ಮಾಫಿ ಪಾಸ್’ (ಖಾಸಗಿ ಜಮೀನಿನ ವೃಕ್ಷ ಕತ್ತರಿಗೆ ಸಮ್ಮತಿ) ಹೆಸರಿನಲ್ಲಿ ಗಡಿರೇಖೆಯ ಕಾಡು ಮರಗಳನ್ನು ಕತ್ತರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಏಳು ನೌಕರರನ್ನು ಅಮಾನತುಗೊಳಿಸಲಾಗಿದೆ.</p>.<p>ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪಂವಾರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.</p>.<p>ಚಿಕ್ಕಮಗಳೂರು ವಿಭಾಗದ ಪ್ರಭಾರ ಸರ್ವೆ ರೇಂಜರ್ ದಿನೇಶ್, ಫಾರೆಸ್ಟರ್ಗಳಾದ ಮಧುಸೂದನ್, ಶಿವರಾಜ ನಾಯಕ್, ಮೂಡಿಗೆರೆ ಉಪವಿಭಾಗದ ಅರಣ್ಯ ರಕ್ಷಕ ಸುರೇಶ್, ಕೊಪ್ಪ ವಿಭಾಗದ ಸೆಕ್ಷನ್ ಫಾರೆಸ್ಟರ್ ಯಾಸಿನ್ ಬಾಷಾ, ಅರಣ್ಯ ರಕ್ಷಕ ನವೀನ್ಕುಮಾರ್, ಸರ್ವೆ ಫಾರೆಸ್ಟರ್ ಅರುಣ್ಕುಮಾರ್ ಬಾರಂಗಿ ಅಮಾನತುಗೊಂಡವರು.</p>.<p>‘ಪ್ರಕರಣದ ನಿಷ್ಪಕ್ಷಪಾತ ತನಿಖೆ ನಿಟ್ಟಿನಲ್ಲಿ ಈ ಕ್ರಮ ವಹಿಸಲಾಗಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಏಳು ಮಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಕುರಿತು ಕೂಲಂಕಷವಾಗಿ ವಿಚಾರಣೆ ನಡೆಸಲು ಸೂಚನೆ ನೀಡಿದ್ದೇನೆ’ ಎಂದು ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪಂವಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಏನಿದು ಪ್ರಕರಣ:</strong> ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ‘ಮಾಫಿ ಪಾಸ್’ ಹೆಸರಿನಲ್ಲಿ ಗಡಿರೇಖೆಯ ಸುಮಾರು 350ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ ಎಂದು ಈಚೆಗೆ ದೂರು ದಾಖಲಾಗಿತ್ತು. ಅಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಬಾಳೂರು ಮೀಸಲು ಅರಣ್ಯದಲ್ಲಿ ‘ಮಾಫಿ ಪಾಸ್’ (ಖಾಸಗಿ ಜಮೀನಿನ ವೃಕ್ಷ ಕತ್ತರಿಗೆ ಸಮ್ಮತಿ) ಹೆಸರಿನಲ್ಲಿ ಗಡಿರೇಖೆಯ ಕಾಡು ಮರಗಳನ್ನು ಕತ್ತರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಏಳು ನೌಕರರನ್ನು ಅಮಾನತುಗೊಳಿಸಲಾಗಿದೆ.</p>.<p>ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪಂವಾರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.</p>.<p>ಚಿಕ್ಕಮಗಳೂರು ವಿಭಾಗದ ಪ್ರಭಾರ ಸರ್ವೆ ರೇಂಜರ್ ದಿನೇಶ್, ಫಾರೆಸ್ಟರ್ಗಳಾದ ಮಧುಸೂದನ್, ಶಿವರಾಜ ನಾಯಕ್, ಮೂಡಿಗೆರೆ ಉಪವಿಭಾಗದ ಅರಣ್ಯ ರಕ್ಷಕ ಸುರೇಶ್, ಕೊಪ್ಪ ವಿಭಾಗದ ಸೆಕ್ಷನ್ ಫಾರೆಸ್ಟರ್ ಯಾಸಿನ್ ಬಾಷಾ, ಅರಣ್ಯ ರಕ್ಷಕ ನವೀನ್ಕುಮಾರ್, ಸರ್ವೆ ಫಾರೆಸ್ಟರ್ ಅರುಣ್ಕುಮಾರ್ ಬಾರಂಗಿ ಅಮಾನತುಗೊಂಡವರು.</p>.<p>‘ಪ್ರಕರಣದ ನಿಷ್ಪಕ್ಷಪಾತ ತನಿಖೆ ನಿಟ್ಟಿನಲ್ಲಿ ಈ ಕ್ರಮ ವಹಿಸಲಾಗಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಏಳು ಮಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಕುರಿತು ಕೂಲಂಕಷವಾಗಿ ವಿಚಾರಣೆ ನಡೆಸಲು ಸೂಚನೆ ನೀಡಿದ್ದೇನೆ’ ಎಂದು ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪಂವಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಏನಿದು ಪ್ರಕರಣ:</strong> ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ‘ಮಾಫಿ ಪಾಸ್’ ಹೆಸರಿನಲ್ಲಿ ಗಡಿರೇಖೆಯ ಸುಮಾರು 350ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ ಎಂದು ಈಚೆಗೆ ದೂರು ದಾಖಲಾಗಿತ್ತು. ಅಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>