ಶಿಕ್ಷಣ ಇಲಾಖೆ ವತಿಯಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾತಂತ್ರ ಸಂಗ್ರಾಮದ ಕುರಿತು ಪ್ರಬಂಧ, ಚರ್ಚಾ ಸ್ಪರ್ಧೆ, ಆಶುಭಾಷಣ ಸಹಿತ ವಿವಿಧ ಸ್ಪರ್ಧೆ ನಡೆಸಬೇಕು. ಆರೋಗ್ಯ ಇಲಾಖೆ ವತಿಯಿಂದ ಯೋಗ, ರಕ್ತದಾನ, ಆರೋಗ್ಯ ತಪಾಸಣೆ ಶಿಬಿರ, ಕೋವಿಡ್–19 ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾಲ್ಲೂಕುಮಟ್ಟದಲ್ಲಿ ಕ್ರೀಡಾಕೂಟ ಏರ್ಪಡಿಸಬೇಕು ಎಂದರು.