ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ರಸ್ತೆ ಅಪಘಾತ; 9 ಕುರಿ ಸಾವು

Last Updated 15 ನವೆಂಬರ್ 2021, 16:22 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಕುರಿಚಿಕ್ಕನಹಳ್ಳಿ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುರಿ ಹಿಂಡಿಗೆ ವಾಹನ ಡಿಕ್ಕಿ ಹೊಡೆದು 9 ಕುರಿಗಳು ಸೋಮವಾರ ಮೃತಪಟ್ಟಿವೆ.

ರಾತ್ರಿ 7.30ರ ಹೊತ್ತಿನಲ್ಲಿ ಅಪಘಾತ ಸಂಭವಿಸಿದೆ. ಈ ಕುರಿಗಳು ಕುರಿ ಚಿಕ್ಕನಹಳ್ಳಿಯ ರಂಗೇಗೌಡ ಅವರವು. ಏಳು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುರಿಗಳಿಗೆ ಗುದ್ದಿದ ವಾಹನದ ನಂಬರ್‌ ಸಿಕ್ಕಿದೆ. ವಾಹನ ಪತ್ತೆ ಕಾರ್ಯದಲ್ಲಿ ತೊಡಗಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT