ಲಕ್ಕವಳ್ಳಿಯಿಂದ ತರೀಕೆರೆಗೆ ಬರುತ್ತಿದ್ದ ಬಸ್ ಚಾಲಕನ ನಿಯತ್ರಂಣ ತಪ್ಪಿ, ರಸ್ತೆ ಪಕ್ಕದಲ್ಲಿ ನಿಂತಿದ್ದ ವಿದ್ಯಾರ್ಥಿಗಳತ್ತ ನುಗ್ಗಿದೆ. ಗಂಭಿರವಾಗಿ ಗಾಯಗೂಂಡ ತುಳಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿನಿ ನಿವೇದಿತಾ (14) ಬಸ್ನ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡರು. ಬಸ್ ಅನ್ನು ಹಿಂದಕ್ಕೆ ತಳ್ಳಿ ಸಾರ್ವಜನಿಕರು ಅವರನ್ನು ರಕ್ಷಿಸಿದರು. ನಿವೇದಿತಾ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.