ಈ ರಸ್ತೆಯು ಕೊಡಗು ಜಿಲ್ಲೆಯ ವಿರಾಜಪೇಟೆಯಿಂದ ಉಡುಪಿ ಜಿಲ್ಲೆಯ ಬೈಂದೂರಿನವರೆಗೆ ಸಂಪರ್ಕ ಕಲ್ಪಿಸುತ್ತದೆ. ಹೆದ್ದಾರಿಯು ವಸ್ತಾರೆ ಗ್ರಾಮದ ಬಳಿ ಕವಲೊಡೆದು ಆಲ್ದೂರು ಮಾರ್ಗವಾಗಿ ಶೃಂಗೇರಿ, ಹರಿಹರಪುರ ಹೊರನಾಡು ಸಂಪರ್ಕಿಸುತ್ತದೆ. ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುತ್ತದೆ. ದೇವಸ್ಥಾನಗಳಿಗೆ ಭೇಟಿ ನೀಡಲು ಬರುವ ಭಕ್ತರು ಮತ್ತು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಇದೇ ರಸ್ತೆ ಮೂಲಕ ಬರಬೇಕಾಗಿದ್ದು, ಹದಗೆಟ್ಟ ರಸ್ತೆಯಲ್ಲಿ ಅವರ ಪಾಡು ಹೇಳತೀರದಾಗಿದೆ.