<p><strong>ಮತ್ತಿಮರ (ನರಸಿಂಹರಾಜಪುರ):</strong> ಮಾನವೀಯತೆ ದೃಷ್ಟಿಯಿಂದ ಅನಾಥಾಶ್ರಮದಲ್ಲಿರುವ ಅನಾಥರು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡ್ ಮಾಡಿಸಲಾಗುತ್ತಿದೆ ಎಂದು ತಹಶೀಲ್ದಾರ್ ನೂರುಲ್ ಹುದಾ ಹೇಳಿದರು.</p>.<p>ತಾಲ್ಲೂಕಿನ ಬಿ.ಎಚ್.ಕೈಮರ ಸಮೀಪದ ಮತ್ತಿಮರ ದಿವ್ಯ ಕಾರುಣ್ಯ ಆನಂದಾಶ್ರಮದಲ್ಲಿ ಅನಾಥರಿಗೆ ಆಧಾರ್ ಮಾಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮಾನವೀಯತೆ ದೃಷ್ಟಿಯಿಂದ ಸರ್ಕಾರದ ಅಧಿಕಾರಿಗಳು ಅನಾಥಾಶ್ರಮಕ್ಕೆ ಬಂದು ಆಧಾರ್ ಮಾಡಿಸಿಕೊಡುತ್ತಿದ್ದಾರೆ. ಇದರಿಂದ ಸರ್ಕಾರದಿಂದ ಪಿಂಚಣಿ, ಪಡಿತರ ಲಭಿಸಲಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಮಾತನಾಡಿ, ಪಟ್ಟಣದ ಹಲವು ವಾರ್ಡ್ ಹಾಗೂ ತಾಲ್ಲೂಕಿನ ಅನಾಥಾ ಶ್ರಮದ ಅನೇಕರಿಗೆ ಆಧಾರ್ ಕಾರ್ಡ್ ಇಲ್ಲದೆ ಇರುವುದು ಗಮನಕ್ಕೆ ಬಂದಿತ್ತು. ಇದರಿಂದ ಅನೇಕ ವೃದ್ಧರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಿಶಾ ಸಭೆಯಲ್ಲಿ ಪ್ರಸ್ತಾಪವಾಗಿತ್ತು ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವೀರಭದ್ರಯ್ಯ ಮಾಜಿ ಗೌಡರ್ ಮಾತನಾಡಿ, ತಾಲ್ಲೂಕಿನ 4 ಅನಾಥಾಶ್ರಮಗಳಿದ್ದು ಯಾರಿಗೂ ಆಧಾರ್ ಕಾರ್ಡ್ ಇರಲಿಲ್ಲ. ಇದರಿಂದ ಸೌಲಭ್ಯ ವಂಚಿತರಾಗಿದ್ದರು. ಅನಾಥ ವೃದ್ಧರಿಗೆ ಇಲಾಖೆ ವತಿಯಿಂದ ಆಧಾರ್ ಕಾರ್ಡ್ ಮಾಡಿಸಲಾಗುತ್ತಿದೆ ಎಂದರು.</p>.<p>ದಿವ್ಯ ಕಾರುಣ್ಯ ಅನಂದಾಶ್ರಮದ ಮುಖ್ಯಸ್ಥೆ ಲಿಸ್ಸಿ, ಅಂಚೆ ಕಚೇರಿ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮತ್ತಿಮರ (ನರಸಿಂಹರಾಜಪುರ):</strong> ಮಾನವೀಯತೆ ದೃಷ್ಟಿಯಿಂದ ಅನಾಥಾಶ್ರಮದಲ್ಲಿರುವ ಅನಾಥರು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡ್ ಮಾಡಿಸಲಾಗುತ್ತಿದೆ ಎಂದು ತಹಶೀಲ್ದಾರ್ ನೂರುಲ್ ಹುದಾ ಹೇಳಿದರು.</p>.<p>ತಾಲ್ಲೂಕಿನ ಬಿ.ಎಚ್.ಕೈಮರ ಸಮೀಪದ ಮತ್ತಿಮರ ದಿವ್ಯ ಕಾರುಣ್ಯ ಆನಂದಾಶ್ರಮದಲ್ಲಿ ಅನಾಥರಿಗೆ ಆಧಾರ್ ಮಾಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮಾನವೀಯತೆ ದೃಷ್ಟಿಯಿಂದ ಸರ್ಕಾರದ ಅಧಿಕಾರಿಗಳು ಅನಾಥಾಶ್ರಮಕ್ಕೆ ಬಂದು ಆಧಾರ್ ಮಾಡಿಸಿಕೊಡುತ್ತಿದ್ದಾರೆ. ಇದರಿಂದ ಸರ್ಕಾರದಿಂದ ಪಿಂಚಣಿ, ಪಡಿತರ ಲಭಿಸಲಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಮಾತನಾಡಿ, ಪಟ್ಟಣದ ಹಲವು ವಾರ್ಡ್ ಹಾಗೂ ತಾಲ್ಲೂಕಿನ ಅನಾಥಾ ಶ್ರಮದ ಅನೇಕರಿಗೆ ಆಧಾರ್ ಕಾರ್ಡ್ ಇಲ್ಲದೆ ಇರುವುದು ಗಮನಕ್ಕೆ ಬಂದಿತ್ತು. ಇದರಿಂದ ಅನೇಕ ವೃದ್ಧರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಿಶಾ ಸಭೆಯಲ್ಲಿ ಪ್ರಸ್ತಾಪವಾಗಿತ್ತು ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವೀರಭದ್ರಯ್ಯ ಮಾಜಿ ಗೌಡರ್ ಮಾತನಾಡಿ, ತಾಲ್ಲೂಕಿನ 4 ಅನಾಥಾಶ್ರಮಗಳಿದ್ದು ಯಾರಿಗೂ ಆಧಾರ್ ಕಾರ್ಡ್ ಇರಲಿಲ್ಲ. ಇದರಿಂದ ಸೌಲಭ್ಯ ವಂಚಿತರಾಗಿದ್ದರು. ಅನಾಥ ವೃದ್ಧರಿಗೆ ಇಲಾಖೆ ವತಿಯಿಂದ ಆಧಾರ್ ಕಾರ್ಡ್ ಮಾಡಿಸಲಾಗುತ್ತಿದೆ ಎಂದರು.</p>.<p>ದಿವ್ಯ ಕಾರುಣ್ಯ ಅನಂದಾಶ್ರಮದ ಮುಖ್ಯಸ್ಥೆ ಲಿಸ್ಸಿ, ಅಂಚೆ ಕಚೇರಿ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>