ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಥಿಲ ಸೇತುವೆ ವೀಕ್ಷಿಸಿದ ಲೋಕೋಪಯೋಗಿ ಇಲಾಖೆ ಎಇಇ

Published 27 ಅಕ್ಟೋಬರ್ 2023, 14:38 IST
Last Updated 27 ಅಕ್ಟೋಬರ್ 2023, 14:38 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಬಣಕಲ್ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬಣಕಲ್ ಗ್ರಾಮಕ್ಕೆ ಸಾಗುವ ಸೇತುವೆ ಶಿಥಿಲಗೊಂಡಿರುವ ಮಾಹಿತಿ ತಿಳಿದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚೆನ್ನಕೇಶವ ಹಾಗೂ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚೆನ್ನಕೇಶವ ಅವರು ಸೇತುವೆ ತುಂಬ ಹಳೆಯದಾಗಿದ್ದು ಕಿರಿದಾಗಿದೆ. ಶಿಥಿಲಗೊಂಡಿರುವುದನ್ನು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು ಘನ ವಾಹನ ಸಂಚಾರವನ್ನು ನಿರ್ಬಂಧಿಸಿ ಎಚ್ಚರಿಕೆ ಫಲಕ ಹಾಕಲು ತೀರ್ಮಾನಿಸಲಾಗಿದೆ. ಹೊಸ ಸೇತುವೆ ನಿರ್ಮಿಸುವ ಬಗ್ಗೆ ಶಾಸಕಿ ನಯನಾ ಮೋಟಮ್ಮ ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು' ಎಂದರು. ಇಲಾಖೆ ಅಧಿಕಾರಿ ಚೆನ್ನಯ್ಯ, ಗ್ರಾಮಸ್ಥರಾದ ಬಿ.ಎನ್.ದಿವ್ಯಾ ಪ್ರಸಾದ್, ಬಿ.ಟಿ.ಶರತ್, ಬಿ.ಎನ್.ಸಂದೇಶ್, ಬಿ.ಸಿ.ಪ್ರವೀಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT