ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ: ಪಿಡಿಒ, ಗ್ರಾ.ಪಂ ಅಧ್ಯಕ್ಷ ಎಸಿಬಿ ಬಲೆಗೆ

Last Updated 13 ಸೆಪ್ಟೆಂಬರ್ 2019, 17:10 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ತಾಲ್ಲೂಕಿನ ನಂದೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಈರೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಟಿ.ಪರಮೇಶ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಎಸಿಬಿ ಅಧಿಕಾರಿಗಳು ಪಂಚಾಯಿತಿ ಕಚೇರಿಗೆ ದಾಳಿ ಮಾಡಿ ಬಂಧಿಸಿದ್ದಾರೆ. ನಗದು ವಶಪಡಿಸಿಕೊಂಡಿದ್ದಾರೆ.

‘ಗುತ್ತಿಗೆದಾರ ಎನ್‌.ಜಿ.ಗೌತಮ್‌ ಎಂಬುವರು ಗ್ರಾಮ ಪಂಚಾಯಿತಿಗೆ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಕಾಮಗಾರಿಗೆ ₹ 6 ಲಕ್ಷದ ಸಾಮಗ್ರಿ ಪೂರೈಸಿದ್ದರು. ಬಿಲ್‌ ಪಾವತಿಗೆ ₹ 34 ಸಾವಿರ ಲಂಚಕ್ಕೆ ಇವರಿಬ್ಬರು ಬೇಡಿಕೆ ಇಟ್ಟು ₹ 10 ಸಾವಿರ ಪಡೆದಿದ್ದರು. ಉಳಿಕೆ 24 ಸಾವಿರ ಶುಕ್ರವಾರ ಕೊಡುವಂತೆ ತಿಳಿಸಿದ್ದರು. ಅದರಂತೆ ಗೌತಮ್‌ ಶುಕ್ರವಾರ ಉಳಿಕೆ ಹಣ ನೀಡಿದ್ದಾರೆ. ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.

ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಗೌತಮ್‌ ಅವರು ಎಸಿಬಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT