ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕನಿಗೆ ಒಂದು ವರ್ಷ ಜೈಲು, ದಂಡ

ಅತಿವೇಗವಾಗಿ ವಾಹನ ಚಾಲನೆ; ಸಾವು ಪ್ರಕರಣ
Last Updated 27 ಮಾರ್ಚ್ 2019, 16:01 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅಜಾಗರೂಕತೆ ಮತ್ತು ಅತಿವೇಗವಾಗಿ ವಾಹನ ಚಲಾಯಿಸಿ ಜೀವಕ್ಕೆ ಕುತ್ತು ಎಸಗಿದ್ದ ಪ್ರಕರಣದಡಿ ಕಾರು ಚಾಲಕ ಶಂಕರಪುರದ ದೇವರಾಜ್‌ಗೆ ಒಂದು ವರ್ಷ ಜೈಲು, ₹ 5,000ದಂಡವನ್ನು ಒಂದನೆ ಹೆಚ್ಚುವರಿ ಹಿರಿಯ ಸಿವಿಲ್ ಕೋರ್ಟ್ ವಿಧಿಸಿದೆ.

ನ್ಯಾಯಾಧೀಶರಾದ ಎನ್.ಎಂ.ರಮೇಶ್ ಈ ಆದೇಶ ನೀಡಿದ್ದಾರೆ.

ಏನಿದು ಪ್ರಕರಣ: 2015ರ ಮಾರ್ಚ್‌ 8ರಂದು ದೇವರಹಳ್ಳಿ ಗೇಟ್ ಬಳಿ ಅಪಘಾತ ನಡೆದಿತ್ತು. ಯೋಗೇಶ್, ಕುಟುಂಬದವರಿದ್ದ ಕಾರು ಮತ್ತು ದೇವರಾಜ್ ಕಾರು ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಯೋಗೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಅವರು ಪತ್ನಿ, ಮಕ್ಕಳು, ತಾಯಿ ತೀವ್ರವಾಗಿ ಗಾಯಗೊಂಡಿದ್ದರು.

ಗ್ರಾಮಾಂತರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದರು. ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರವನ್ನು ಕೋರ್ಟ್‌ಗೆ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಸಹಾಯಕ ಪಬ್ಲಿಕ್‌ ಪ್ರಾಸಿಕ್ಯುಟರ್‌ ರಾಘವೇಂದ್ರ ರಾಯ್ಕರ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT