ಆಲ್ದೂರು (ಬಾಳೆಹೊನ್ನೂರು): ಇಲ್ಲಿಗೆ ಸಮೀಪದ ಬನ್ನೂರು- ಶಂಕರ್ ಪಾಲ್ಸ್ ನಡುವೆ ಖಾಸಗಿ ಬಸ್ ಮತ್ತು ಕಾರು ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿದ ಕಾರಣ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಮಡಿಕೇರಿ ಮೂಲದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾಳೆಹೊನ್ನೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಮೂವರನ್ನು ಚಿಕ್ಕಮಗಳೂರಿನ ಆಸ್ಪತ್ರೆಗೆ ಹಾಗೂ ಒಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು ಒಂದು ಗಂಟೆಗಳ ಕಾಲ ಆಲ್ದೂರು-ಬಾಳೆಹೊನ್ನೂರು ನಡುವೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.