ಚಿಕ್ಕಮಗಳೂರು:ತಾಲ್ಲೂಕಿನ ಚಿಕ್ಕಮಗಳೂರು–ಮೂಡಿಗೆರೆ ರಸ್ತೆಯಲ್ಲಿರುವ ಬಂಟರ ಭವನದ ಬಳಿ ಪೊಲೀಸ್ ಜೀಪ್ ಶನಿವಾರ ಬೆಳಿಗ್ಗೆ ಪಲ್ಟಿಯಾಗಿದ್ದು, ಇನ್ಸ್ಪೆಕ್ಟರ್ ಸೇರಿ ನಾಲ್ಕು ಮಂದಿಗೆ ಗಾಯಗಳಾಗಿವೆ.
ಪೊಲೀಸ್ ಜೀಪಿನಲ್ಲಿದ್ದ ಮೂಡಿಗೆರೆ ಇನ್ಸ್ಪೆಕ್ಟರ್ ಕೆ.ಕೆ.ರಘು, ಕಾನ್ಸ್ಟೇಬಲ್ಗಳಾದ ಮಂಜುನಾಥ್, ಮನು, ವೀಣಾ ಅವರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.