<p><strong>ಕಡೂರು: </strong>ರಜೆಯ ಮೇಲೆ ಹಳ್ಳಿಗೆ ಬಂದಿದ್ದ ಸಿ.ಆರ್.ಪಿ.ಎಫ್ ಯೋಧ ಬಿ.ಸಿ.ಚಿದಾನಂದ (27) ಸಖರಾಯಪಟ್ಟಣ-ಉದ್ದೇಬೋರನಹಳ್ಳಿ ಸಮೀಪ ಕೇಸರಿ ಫಾರಂ ಬಳಿ ಸ್ಕೂಟರ್ನಲ್ಲಿ ಸಾಗುತ್ತಿದ್ದಾಗ ಸೇತುವೆಗೆ ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.</p>.<p>ಮಂಗಳವಾರ ರಾತ್ರಿಯಾದರೂ ಚಿದಾನಂದ ಮನೆಗೆ ಬಾರದಿದ್ದಾಗ ಅವರ ಕುಟುಂಬದವರು ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಿಎಸ್ಐ ಮೌನೇಶ್ ಮತ್ತು ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾಗ ಉದ್ದೇಬೋರನಹಳ್ಳಿ ಸೇತುವೆ ಬಳಿ ಅವರ ಶವ ಮತ್ತು ಸ್ಕೂಟಿ ಪತ್ತೆಯಾಗಿದೆ.</p>.<p>ಸಖರಾಯಪಟ್ಟಣ ಹೋಬಳಿಯ ಬಾಳೇನಹಳ್ಳಿ ಗ್ರಾಮದ ಕೃಷಿಕ ಬಿ.ಸಿ.ಚಂದ್ರೇಗೌಡ ಅವರ ಪುತ್ರ ಬಿ.ಸಿ.ಚಿದಾನಂದ 8 ವರ್ಷಗಳಿಂದ ಸಿ.ಆರ್.ಪಿ.ಎಫ್.ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಇನ್ನೂ ಅವಿವಾಹಿತರು. ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಅಸ್ಸಾಂ ರೆಜಿಮೆಂಟ್ನಲ್ಲಿದ್ದ ಅವರು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು.</p>.<p>ಯೋಧನ ಮೃತದೇಹವನ್ನು ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಗುರುವಾರ ಸ್ವಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸೂಚಿಸಿದರು. ಬಾಳೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಮಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು: </strong>ರಜೆಯ ಮೇಲೆ ಹಳ್ಳಿಗೆ ಬಂದಿದ್ದ ಸಿ.ಆರ್.ಪಿ.ಎಫ್ ಯೋಧ ಬಿ.ಸಿ.ಚಿದಾನಂದ (27) ಸಖರಾಯಪಟ್ಟಣ-ಉದ್ದೇಬೋರನಹಳ್ಳಿ ಸಮೀಪ ಕೇಸರಿ ಫಾರಂ ಬಳಿ ಸ್ಕೂಟರ್ನಲ್ಲಿ ಸಾಗುತ್ತಿದ್ದಾಗ ಸೇತುವೆಗೆ ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.</p>.<p>ಮಂಗಳವಾರ ರಾತ್ರಿಯಾದರೂ ಚಿದಾನಂದ ಮನೆಗೆ ಬಾರದಿದ್ದಾಗ ಅವರ ಕುಟುಂಬದವರು ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಿಎಸ್ಐ ಮೌನೇಶ್ ಮತ್ತು ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾಗ ಉದ್ದೇಬೋರನಹಳ್ಳಿ ಸೇತುವೆ ಬಳಿ ಅವರ ಶವ ಮತ್ತು ಸ್ಕೂಟಿ ಪತ್ತೆಯಾಗಿದೆ.</p>.<p>ಸಖರಾಯಪಟ್ಟಣ ಹೋಬಳಿಯ ಬಾಳೇನಹಳ್ಳಿ ಗ್ರಾಮದ ಕೃಷಿಕ ಬಿ.ಸಿ.ಚಂದ್ರೇಗೌಡ ಅವರ ಪುತ್ರ ಬಿ.ಸಿ.ಚಿದಾನಂದ 8 ವರ್ಷಗಳಿಂದ ಸಿ.ಆರ್.ಪಿ.ಎಫ್.ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಇನ್ನೂ ಅವಿವಾಹಿತರು. ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಅಸ್ಸಾಂ ರೆಜಿಮೆಂಟ್ನಲ್ಲಿದ್ದ ಅವರು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು.</p>.<p>ಯೋಧನ ಮೃತದೇಹವನ್ನು ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಗುರುವಾರ ಸ್ವಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸೂಚಿಸಿದರು. ಬಾಳೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಮಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>