ಮುದ್ರೆಮನೆ ಗ್ರಾಮದಲ್ಲಿರುವ ಹರೀಶ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಈ ಮೂವರು ಗುರುವಾರ ಸಂಜೆಯ ವೇಳೆಗೆ ಮೂಡಿಗೆರೆ ಪಟ್ಟಣದಿಂದ ಕಾಲೇಜಿನತ್ತ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ನಿಯಂತ್ರಣ ಕಳೆದುಕೊಂಡು ಕಾರು ಬದಿಯ ಮರಕ್ಕೆ ರಸ್ತೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ತಕ್ಷಣವೇ ಸ್ಥಳೀಯರು ಗಾಯಗೊಂಡ ಹರ್ಷಿತ್ ಹಾಗೂ ಮೃತ ವಿದ್ಯಾರ್ಥಿಗಳ ದೇಹವನ್ನು ಹೊರ ತೆಗೆದು, ಮಹಾತ್ಮಗಾಂಧಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.