ಅಜ್ಜಂಪುರ: ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಶ್ಯಾನುಬೋಗನಹಳ್ಳಿ ನಿವಾಸಿ, ಚಿಕ್ಕಾನವಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಎಸ್.ಕೆ. ನಾಗರಾಜ್ (55) ಶನಿವಾರ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ನಾಲ್ವರು ಮಕ್ಕಳು ಇದ್ದಾರೆ. 25 ವರ್ಷಗಳಿಂದ ಅವರು ಚಿಕ್ಕಾನವಂಗಲ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ತರೀಕೆರೆಯಿಂದ ಸ್ವಗ್ರಾಮಕ್ಕೆ ಹಿಂತಿರುಗುವಾಗ ಬೈಕ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಗರಾಜ್ ಮೃತಪಟ್ಟರು. ಅವರ ಅಂತ್ಯಸಂಸ್ಕಾರ ಸ್ವಗ್ರಾಮದಲ್ಲಿ ಭಾನುವಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.