ತಡೆಗೋಡೆ ನಿರ್ಮಿಸಲು ಸಾರ್ವಜನಿಕರ ಒತ್ತಾಯ: ಚೀಕನಹಳ್ಳಿ–ಕಸ್ಕೆಬೈಲು ನಡುವಿನ ಈ ತಿರುವಿನಲ್ಲಿ ಇತ್ತೀಚೆಗೆ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಸಂಬಂಧಿಸಿದವರಿಗೆ ಮನವಿ ಮಾಡಿದ್ದರೂ, ಹೆದ್ದಾರಿ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡೆಗೋಡೆ ನಿರ್ಮಾಣವಾಗಿಲ್ಲ. ಆದ್ದರಿಂದ ವಾಹನಗಳು ಪ್ರಪಾತಕ್ಕೆ ಬೀಳುತ್ತಿದ್ದು ,ಕೂಡಲೇ ವೈಜ್ಞಾನಿಕವಾಗಿ ತಡೆಗೋಡೆ ನಿರ್ಮಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.