<p><strong>ತರೀಕೆರೆ:</strong> ತಾಲ್ಲೂಕಿನ ಸಂತವೇರಿ ಗ್ರಾಮದ ಅಬ್ದುಲ್ ಸುಬಾನ್ ಬಿನ್ ಅಬ್ದುಲ್ ಮಜೀದ್ ಎಂಬುವರಿಗೆ ಸೇರಿದ ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ. </p><p>ಅಂದಾಜು 1.20 ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಬೆಳೆದಿದ್ದ ಕಾಫಿ, ಕಾಳು ಮೆಣಸು, ಸಿಲ್ವರ್ ಮರಗಳು ಬೆಂಕಿಗೆ ಆಹುತಿಯಾಗಿದೆ. </p><p>ರಾತ್ರಿ ವೇಳೆ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದೆ. ತೋಟದಲ್ಲಿ ಒಣಗಿದ ತರಗೆಲೆಗಳು ಇದ್ದಿದ್ದರಿಂದ ಬೆಂಕಿಯು ಕ್ಷಿಪ್ರಗತಿಯಲ್ಲಿ ವ್ಯಾಪಿಸಿಸಿದೆ. </p><p>ಸುಮಾರು ₹20 ಲಕ್ಷದಷ್ಟು ನಷ್ಟವಾಗಿದೆ ಎಂದು ಅಬ್ದುಲ್ ಮಜೀದ್ ಲಿಂಗದಹಳ್ಳಿ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ತಾಲ್ಲೂಕಿನ ಸಂತವೇರಿ ಗ್ರಾಮದ ಅಬ್ದುಲ್ ಸುಬಾನ್ ಬಿನ್ ಅಬ್ದುಲ್ ಮಜೀದ್ ಎಂಬುವರಿಗೆ ಸೇರಿದ ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ. </p><p>ಅಂದಾಜು 1.20 ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಬೆಳೆದಿದ್ದ ಕಾಫಿ, ಕಾಳು ಮೆಣಸು, ಸಿಲ್ವರ್ ಮರಗಳು ಬೆಂಕಿಗೆ ಆಹುತಿಯಾಗಿದೆ. </p><p>ರಾತ್ರಿ ವೇಳೆ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದೆ. ತೋಟದಲ್ಲಿ ಒಣಗಿದ ತರಗೆಲೆಗಳು ಇದ್ದಿದ್ದರಿಂದ ಬೆಂಕಿಯು ಕ್ಷಿಪ್ರಗತಿಯಲ್ಲಿ ವ್ಯಾಪಿಸಿಸಿದೆ. </p><p>ಸುಮಾರು ₹20 ಲಕ್ಷದಷ್ಟು ನಷ್ಟವಾಗಿದೆ ಎಂದು ಅಬ್ದುಲ್ ಮಜೀದ್ ಲಿಂಗದಹಳ್ಳಿ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>