<p><strong>ಚಿಕ್ಕಮಗಳೂರು</strong>: ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪಾಲಕರ ಸಹಕಾರವಿದ್ದರೆ ಯಾವುದೇ ಕ್ಷೇತ್ರದಲ್ಲೂ ಸ್ಥಾನಮಾನ ಗಳಿಸಬಹುದು ಎಂದು ಯುರೇಕಾ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ದೀಪಕ್ ದೊಡ್ಡಯ್ಯ ಹೇಳಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳಿಸಿದ ಬಸ್ಕಲ್ ಗ್ರಾಮದ ವಿದ್ಯಾರ್ಥಿ ಕುನಾಲ್ ರವಿರೇಜಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.</p>.<p>ಶಿಕ್ಷಕರ ಪ್ರೋತ್ಸಾಹ, ಪಾಲಕರ ಸಹಕಾರವಿದ್ದರೆ ಸಮಾಜದ ಮುಖ್ಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು. ಹೀಗಾಗಿ ಆಸಕ್ತಿಯಿರುವ ಕ್ಷೇತ್ರದಲ್ಲಿ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಪೋಷಕರಿಗೆ ಸಲಹೆ ನೀಡಿದರು.</p>.<p>ಕುನಾಲ್ ರವಿತೇಜ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವುದು ಹೆಮ್ಮೆಯ ಸಂಗತಿ. ಪ್ರತಿಯೊಬ್ಬ ವಿದ್ಯಾರ್ಥಿಗಳು ಗುರಿ ಹೊಂದುವ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ಸಂಗತಿ ಎಂದರು.</p>.<p>ವಿದ್ಯಾರ್ಥಿಯ ಪೋಷಕರಾದ ಮಮತಾ ರವಿಕುಮಾರ್, ಜೆಡಿಎಸ್ ಮುಖಂಡ ಭೈರೇಗೌಡ, ಮುಖಂಡರಾದ ಸಚಿನ್ಸಿಂಗ್, ಶಶಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪಾಲಕರ ಸಹಕಾರವಿದ್ದರೆ ಯಾವುದೇ ಕ್ಷೇತ್ರದಲ್ಲೂ ಸ್ಥಾನಮಾನ ಗಳಿಸಬಹುದು ಎಂದು ಯುರೇಕಾ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ದೀಪಕ್ ದೊಡ್ಡಯ್ಯ ಹೇಳಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳಿಸಿದ ಬಸ್ಕಲ್ ಗ್ರಾಮದ ವಿದ್ಯಾರ್ಥಿ ಕುನಾಲ್ ರವಿರೇಜಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.</p>.<p>ಶಿಕ್ಷಕರ ಪ್ರೋತ್ಸಾಹ, ಪಾಲಕರ ಸಹಕಾರವಿದ್ದರೆ ಸಮಾಜದ ಮುಖ್ಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು. ಹೀಗಾಗಿ ಆಸಕ್ತಿಯಿರುವ ಕ್ಷೇತ್ರದಲ್ಲಿ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಪೋಷಕರಿಗೆ ಸಲಹೆ ನೀಡಿದರು.</p>.<p>ಕುನಾಲ್ ರವಿತೇಜ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವುದು ಹೆಮ್ಮೆಯ ಸಂಗತಿ. ಪ್ರತಿಯೊಬ್ಬ ವಿದ್ಯಾರ್ಥಿಗಳು ಗುರಿ ಹೊಂದುವ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ಸಂಗತಿ ಎಂದರು.</p>.<p>ವಿದ್ಯಾರ್ಥಿಯ ಪೋಷಕರಾದ ಮಮತಾ ರವಿಕುಮಾರ್, ಜೆಡಿಎಸ್ ಮುಖಂಡ ಭೈರೇಗೌಡ, ಮುಖಂಡರಾದ ಸಚಿನ್ಸಿಂಗ್, ಶಶಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>