<p><strong>ಕೊಪ್ಪ</strong>: ‘ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ರೈತರ ಪರವಾಗಿದೆ. ಆದರೆ, ಈ ಕುರಿತು ಸರಿಯಾದ ಅರಿವಿಲ್ಲದೆ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ತಿಳಿಸಿದರು.</p>.<p>ತಾಲ್ಲೂಕಿನ ಕಮ್ಮರಡಿಯಲ್ಲಿ ಶುಕ್ರವಾರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಶಾಖೆ ನೂತನ ಕಟ್ಟಡವನ್ನು ಉದ್ಘಾಟಿಸಿದ ಅವರು, ‘ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಮನಮೋಹನ್ ಸಿಂಗ್ ಅವಧಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದರು. ಆದರೆ, ಇಂದು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ’ ಎಂದರು.</p>.<p>‘ಪಂಜಾಬ್, ಹರಿಯಾಣದಲ್ಲಿ ಎಪಿಎಂಸಿಗಳಲ್ಲಿ ಪಟ್ಟಭದ್ರ ಹಿತಾಸಕ್ತಿ ಗಳಿವೆ. ಕೇರಳದಲ್ಲಿ ಎಪಿಎಂಸಿ ವ್ಯವಸ್ಥೆ ಇಲ್ಲದಿದ್ದರೂ, ಅವರು ಕಾಯ್ದೆ ವಿರೋಧಿಸುತ್ತಿದ್ದಾರೆ. ಹೋರಾಟ ಗಾರರಿಗೆ ನಿಶ್ಚಿತ ಕಾರಣ ತಿಳಿದಿಲ್ಲ, ಅವರು ಕಾಯ್ದೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎನ್.ರಾಮಸ್ವಾಮಿ ಮಾತನಾಡಿ, ‘ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ತರಿಕೆರೆ ಶಾಸಕ ಸುರೇಶ್ ಅವರು ಶೃಂಗೇರಿ ಕ್ಷೇತ್ರಕ್ಕೆ ₹ 15 ಕೋಟಿ ಹೆಚ್ಚುವರಿ ಸಾಲ ಮಂಜೂರು ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಸಲ್ಲದು. ಕ್ಷೇತ್ರದ ಶಾಸಕರು ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದರು. ಸಿ.ಆರ್.ಎಫ್ ರಸ್ತೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಕೂಡ ಸಂಸದರನ್ನು ಆಹ್ವಾನಿಸಲಿಲ್ಲ’ ಎಂದರು.</p>.<p>ಟಿಎಪಿಸಿಎಂಎಸ್ನ ಅಧ್ಯಕ್ಷ ಎಚ್.ಡಿ.ಜಯಂತ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕ್ಷೇತ್ರ ಅಕ್ರಮ– ಸಕ್ರಮ ಸಮಿತಿ ಸದಸ್ಯ ಎಚ್.ಕೆ.ದಿನೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಕೆ.ಕಿರಣ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಅದ್ದಡ ಸತೀಶ್, ಚಾವಲ್ಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ, ಟಿಎಪಿಸಿಎಂಎಸ್ನ ನಿರ್ದೇಶಕರು ಇದ್ದರು.</p>.<p>ವಿರೋಧ ಬೇಡ: ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ‘ಈ ಭಾಗದ ಒತ್ತುವರಿ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ಅಡಿಕೆ ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ನಿವಾರಿಸಲು ಒತ್ತು ನೀಡಲಾಗಿದೆ. ಸಹಕಾರ ಸಂಘದ ಕಾರ್ಯಕ್ರಮಗಳು ಪಕ್ಷಾತೀತವಾಗಿ ನಡೆಯುವಂತಹವು.<br />ಅವುಗಳಿಗೆ ಸಹಕಾರ ನೀಡಬೇಕೇ ವಿನಾ ವಿರೋಧಿಸುವುದಲ್ಲ’ ಎಂದರು.</p>.<p><strong>ಶಾಸಕರನ್ನು ಆಹ್ವಾನಿಸದ್ದಕ್ಕೆ ಪ್ರತಿಭಟನೆ:</strong> ‘ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ’ ಎಂದು ಕಾರ್ಯಕ್ರಮದ ವೇಳೆ ಕೆಲವರು ಪ್ರತಿಭಟನೆ ನಡೆಸಿದರು.</p>.<p>ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಶಿವಪ್ಪಗೌಡ, ಎಚ್.ಕೆ.ಪ್ರಶಾಂತ್, ಕೊಡಿಗೆ ಶ್ರೀನಿವಾಸ್ ಮೂರ್ತಿ, ಚಾವಲ್ಮನೆ ಸುರೇಶ್ ನಾಯ್ಕ್, ಕುಂಬರಗೋಡು ನಾಗಪ್ಪ, ಲತಾ, ಲೀಲಾವತಿ, ಸಮರ್ಥ್, ಚನ್ನಕೇಶವ್ ಹೊಸೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ‘ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ರೈತರ ಪರವಾಗಿದೆ. ಆದರೆ, ಈ ಕುರಿತು ಸರಿಯಾದ ಅರಿವಿಲ್ಲದೆ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ತಿಳಿಸಿದರು.</p>.<p>ತಾಲ್ಲೂಕಿನ ಕಮ್ಮರಡಿಯಲ್ಲಿ ಶುಕ್ರವಾರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಶಾಖೆ ನೂತನ ಕಟ್ಟಡವನ್ನು ಉದ್ಘಾಟಿಸಿದ ಅವರು, ‘ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಮನಮೋಹನ್ ಸಿಂಗ್ ಅವಧಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದರು. ಆದರೆ, ಇಂದು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ’ ಎಂದರು.</p>.<p>‘ಪಂಜಾಬ್, ಹರಿಯಾಣದಲ್ಲಿ ಎಪಿಎಂಸಿಗಳಲ್ಲಿ ಪಟ್ಟಭದ್ರ ಹಿತಾಸಕ್ತಿ ಗಳಿವೆ. ಕೇರಳದಲ್ಲಿ ಎಪಿಎಂಸಿ ವ್ಯವಸ್ಥೆ ಇಲ್ಲದಿದ್ದರೂ, ಅವರು ಕಾಯ್ದೆ ವಿರೋಧಿಸುತ್ತಿದ್ದಾರೆ. ಹೋರಾಟ ಗಾರರಿಗೆ ನಿಶ್ಚಿತ ಕಾರಣ ತಿಳಿದಿಲ್ಲ, ಅವರು ಕಾಯ್ದೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎನ್.ರಾಮಸ್ವಾಮಿ ಮಾತನಾಡಿ, ‘ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ತರಿಕೆರೆ ಶಾಸಕ ಸುರೇಶ್ ಅವರು ಶೃಂಗೇರಿ ಕ್ಷೇತ್ರಕ್ಕೆ ₹ 15 ಕೋಟಿ ಹೆಚ್ಚುವರಿ ಸಾಲ ಮಂಜೂರು ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಸಲ್ಲದು. ಕ್ಷೇತ್ರದ ಶಾಸಕರು ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದರು. ಸಿ.ಆರ್.ಎಫ್ ರಸ್ತೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಕೂಡ ಸಂಸದರನ್ನು ಆಹ್ವಾನಿಸಲಿಲ್ಲ’ ಎಂದರು.</p>.<p>ಟಿಎಪಿಸಿಎಂಎಸ್ನ ಅಧ್ಯಕ್ಷ ಎಚ್.ಡಿ.ಜಯಂತ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕ್ಷೇತ್ರ ಅಕ್ರಮ– ಸಕ್ರಮ ಸಮಿತಿ ಸದಸ್ಯ ಎಚ್.ಕೆ.ದಿನೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಕೆ.ಕಿರಣ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಅದ್ದಡ ಸತೀಶ್, ಚಾವಲ್ಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ, ಟಿಎಪಿಸಿಎಂಎಸ್ನ ನಿರ್ದೇಶಕರು ಇದ್ದರು.</p>.<p>ವಿರೋಧ ಬೇಡ: ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ‘ಈ ಭಾಗದ ಒತ್ತುವರಿ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ಅಡಿಕೆ ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ನಿವಾರಿಸಲು ಒತ್ತು ನೀಡಲಾಗಿದೆ. ಸಹಕಾರ ಸಂಘದ ಕಾರ್ಯಕ್ರಮಗಳು ಪಕ್ಷಾತೀತವಾಗಿ ನಡೆಯುವಂತಹವು.<br />ಅವುಗಳಿಗೆ ಸಹಕಾರ ನೀಡಬೇಕೇ ವಿನಾ ವಿರೋಧಿಸುವುದಲ್ಲ’ ಎಂದರು.</p>.<p><strong>ಶಾಸಕರನ್ನು ಆಹ್ವಾನಿಸದ್ದಕ್ಕೆ ಪ್ರತಿಭಟನೆ:</strong> ‘ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ’ ಎಂದು ಕಾರ್ಯಕ್ರಮದ ವೇಳೆ ಕೆಲವರು ಪ್ರತಿಭಟನೆ ನಡೆಸಿದರು.</p>.<p>ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಶಿವಪ್ಪಗೌಡ, ಎಚ್.ಕೆ.ಪ್ರಶಾಂತ್, ಕೊಡಿಗೆ ಶ್ರೀನಿವಾಸ್ ಮೂರ್ತಿ, ಚಾವಲ್ಮನೆ ಸುರೇಶ್ ನಾಯ್ಕ್, ಕುಂಬರಗೋಡು ನಾಗಪ್ಪ, ಲತಾ, ಲೀಲಾವತಿ, ಸಮರ್ಥ್, ಚನ್ನಕೇಶವ್ ಹೊಸೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>