<p><strong>ಚಿಕ್ಕಮಗಳೂರು:</strong> ಅಂಗನವಾಡಿ ನೌಕರರ ಗೌರವಧನ ಹೆಚ್ಚಿಸುವ ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಮಾರ್ಚ್ 2ರಂದು ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಬಿ. ಅಮ್ಜದ್ ತಿಳಿಸಿದರು.</p>.<p>ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>2011ರಿಂದ ನಿವೃತ್ತರಾಗಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಜಾರಿಗೊಳಿಸಬೇಕು. ಈಗಾಗಲೇ ಸ್ವಯಂ ನಿವೃತ್ತಿ ಹೊಂದಿರುವವರಿಗೂ ಗ್ರಾಚ್ಯುಟಿ ನೀಡಬೇಕು. ಬಲವಂತವಾಗಿ ಬಿಎಲ್ಒ ಜವಾಬ್ದಾರಿ ಹೊರೆಸಲಾಗುತ್ತಿದೆ. ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಸಿ ಬಡಿಸಲು ತರಕಾರಿ ವೆಚ್ಚ ಕೇವಲ 50 ಪೈಸೆ, ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಡಿ.ಎ ₹30 ನೀಡಲಾಗುತ್ತಿದೆ. ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು. ಮಾತೃವಂದನ, ಭಾಗ್ಯಲಕ್ಷ್ಮಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂದರು.</p>.<p>ಅನಾರೋಗ್ಯಕ್ಕೆ ತುತ್ತಾಗುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಶಸ್ತ್ರಚಿಕಿತ್ಸೆ ಸೇರಿ ಎಲ್ಲಾ ರೀತಿಯ ಚಿಕಿತ್ಸೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು. ಅನಾರೋಗ್ಯಕ್ಕೆ ಒಳಗಾದ ಅವಧಿಯನ್ನು ವೇತನ ಸಹಿತ ವೈದ್ಯಕೀಯ ರಜೆ ಎಂದು ಪರಿಗಣಿಸಬೇಕು ಎಂದು ಹೇಳಿದರು.</p>.<p>ಮೊಟ್ಟೆಯ ದರ ಏರುಪೇರು ಆಗುತ್ತಿದ್ದು, ಮಾರುಕಟ್ಟೆಯ ದರ ಹೆಚ್ಚಳಕ್ಕೆ ಅನುಗುಣವಾಗಿ ಮೊಟ್ಟೆ ಹಣ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಬೇಕು ಎಂದರು.</p>.<p>ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ. ಅಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ವಿವರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಜಿಲ್ಲಾ ಘಟಕದ ಅಧ್ಯಕ್ಷ ಗ್ರೇಟಾ ಪರ್ನಾಡಿಸ್, ಪ್ರಧಾನ ಕಾರ್ಯದರ್ಶಿ ಪುಷ್ಪಾವತಿ, ರಾಧಾ ಸುಂದರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಅಂಗನವಾಡಿ ನೌಕರರ ಗೌರವಧನ ಹೆಚ್ಚಿಸುವ ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಮಾರ್ಚ್ 2ರಂದು ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಬಿ. ಅಮ್ಜದ್ ತಿಳಿಸಿದರು.</p>.<p>ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>2011ರಿಂದ ನಿವೃತ್ತರಾಗಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಜಾರಿಗೊಳಿಸಬೇಕು. ಈಗಾಗಲೇ ಸ್ವಯಂ ನಿವೃತ್ತಿ ಹೊಂದಿರುವವರಿಗೂ ಗ್ರಾಚ್ಯುಟಿ ನೀಡಬೇಕು. ಬಲವಂತವಾಗಿ ಬಿಎಲ್ಒ ಜವಾಬ್ದಾರಿ ಹೊರೆಸಲಾಗುತ್ತಿದೆ. ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಸಿ ಬಡಿಸಲು ತರಕಾರಿ ವೆಚ್ಚ ಕೇವಲ 50 ಪೈಸೆ, ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಡಿ.ಎ ₹30 ನೀಡಲಾಗುತ್ತಿದೆ. ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು. ಮಾತೃವಂದನ, ಭಾಗ್ಯಲಕ್ಷ್ಮಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂದರು.</p>.<p>ಅನಾರೋಗ್ಯಕ್ಕೆ ತುತ್ತಾಗುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಶಸ್ತ್ರಚಿಕಿತ್ಸೆ ಸೇರಿ ಎಲ್ಲಾ ರೀತಿಯ ಚಿಕಿತ್ಸೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು. ಅನಾರೋಗ್ಯಕ್ಕೆ ಒಳಗಾದ ಅವಧಿಯನ್ನು ವೇತನ ಸಹಿತ ವೈದ್ಯಕೀಯ ರಜೆ ಎಂದು ಪರಿಗಣಿಸಬೇಕು ಎಂದು ಹೇಳಿದರು.</p>.<p>ಮೊಟ್ಟೆಯ ದರ ಏರುಪೇರು ಆಗುತ್ತಿದ್ದು, ಮಾರುಕಟ್ಟೆಯ ದರ ಹೆಚ್ಚಳಕ್ಕೆ ಅನುಗುಣವಾಗಿ ಮೊಟ್ಟೆ ಹಣ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಬೇಕು ಎಂದರು.</p>.<p>ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ. ಅಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ವಿವರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಜಿಲ್ಲಾ ಘಟಕದ ಅಧ್ಯಕ್ಷ ಗ್ರೇಟಾ ಪರ್ನಾಡಿಸ್, ಪ್ರಧಾನ ಕಾರ್ಯದರ್ಶಿ ಪುಷ್ಪಾವತಿ, ರಾಧಾ ಸುಂದರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>