ಕಟ್ಟಡ ಕಾರ್ಮಿಕರು ಅಸಂಘಟಿತರಾಗಿದ್ದಾರೆ. ಅವರಿಗೆ ಸೌಲಭ್ಯ, ಪರಿಹಾರ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಹಲವಾರು ವರ್ಷಗಳ ಹಿಂದೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಿತು. ಈ ಮಂಡಳಿ ಕಟ್ಟಡ ಮಾಲೀಕರಿಂದ ಸೆಸ್ ಸಂಗ್ರಹಿಸುತ್ತಿತ್ತು. ಅದರಲ್ಲಿ ಕಾರ್ಮಿಕರಿಗೆ ಪಿಂಚಣಿ, ಅಪಘಾತ ಪರಿಹಾರ, ಅಂತ್ಯಕ್ರಿಯೆ ವೆಚ್ಚ, ಮಧುವೆ, ಹೆರಿಗೆ, ಶೈಕ್ಷಣಿಕ ಸಹಾಯಧನ ಸಹಿತ ವಿವಿಧ ಸೌಲಭ್ಯ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು.