<p><strong>ಅಜ್ಜಂಪುರ</strong>: ‘ಜೂ. 14ರಂದು ಗಡೀಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ 7ನೇ ಜಾನಪದ ಸಮ್ಮೇಳನ ಆಯೋಜಿಸಲಾಗುವುದು’ ಎಂದು ಜಾನಪದ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಜೆ.ಬಿ. ಸುರೇಶ್ ತಿಳಿಸಿದರು.</p>.<p>ತಾಲ್ಲೂಕಿನ ತ್ಯಾಗದ ಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಜಾನಪದ ಪರಿಷತ್ತು ಗೀಗಿ ತತ್ವಪದ ಹಾಡುಗಾರ ಹಾಗೂ ಜಾನಪದ ಕಲಾ ಪೋಷಕ ತ್ಯಾಗದಕಟ್ಟೆ ಚಂದ್ರಪ್ರಕಾಶ್ ಅವರನ್ನು ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ ಸಲಹೆ ಬಂದಿದೆ ಎಂದರು.</p>.<p>ಚಂದ್ರಪ್ರಕಾಶ್ ಸಾವಿರಾರು ಒಗಟು ಗಾದೆಗಳನ್ನು ಸಂಗ್ರಹಿಸಿದ್ದಾರೆ. ಜಾನಪದ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ಪುಸ್ತಕ ರಚಿಸಿದ್ದಾರೆ. ತಾಲ್ಲೂಕಿನಲ್ಲಿ ನಡೆದ ಸಮ್ಮೇಳನಗಳಿಗೆ ಪ್ರೋತ್ಸಾಹ ನೀಡಿದ್ದು, ಅವರನ್ನು 7ನೇ ಜಾನಪದ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಸಮಂಜಸವಾಗಿದೆ ಎಂದರು.</p>.<p>ಸಾಹಿತಿ ಇಮ್ರಾನ್ ಅಹಮದ್ ಬೇಗ್, ಪರಿಷತ್ತು ತಾಲ್ಲೂಕು ಗೌರವಾಧ್ಯಕ್ಷ ಮರಳಸಿದ್ದಪ್ಪ ಹಾಗೂ ಪರಿಷತ್ತು ಜಿಲ್ಲಾ ಸಂಚಾಲಕಿ ಗಾಯತ್ರಮ್ಮ, ಗಡೀಹಳ್ಳಿ ಮಂಜುನಾಥ್, ಸಾಹಿತಿ ದಂದೂರು ರಾಜಣ್ಣ, ತ್ಯಾಗದಕಟ್ಟೆ ತಿಪ್ಪೇಶ್, ವಿಜಯಕುಮಾರಿ ಮಾತನಾಡಿದರು.</p>.<p>ಪರಿಷತ್ತು ತಾಲ್ಲೂಕು ಘಟಕ ಅಧ್ಯಕ್ಷ ಮಾಳೆನಳ್ಳಿ ಬಸಪ್ಪ, ಶಿವನಿ ಹೋಬಳಿ ಅಧ್ಯಕ್ಷ ಕಾರೇ ಹಳ್ಳಿ ಬಸಪ್ಪ, ಚಿಕ್ಕನಲ್ಲೂರು ಜಯಣ್ಣ, ಕಲಾವಿದೆ ಜ್ಯೋತಿ, ಶಕುಂತಲಮ್ಮ ಜಯಣ್ಣ ಹಾಗೂ ಪುಷ್ಪಗಿರಿ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-126-1392245129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ</strong>: ‘ಜೂ. 14ರಂದು ಗಡೀಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ 7ನೇ ಜಾನಪದ ಸಮ್ಮೇಳನ ಆಯೋಜಿಸಲಾಗುವುದು’ ಎಂದು ಜಾನಪದ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಜೆ.ಬಿ. ಸುರೇಶ್ ತಿಳಿಸಿದರು.</p>.<p>ತಾಲ್ಲೂಕಿನ ತ್ಯಾಗದ ಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಜಾನಪದ ಪರಿಷತ್ತು ಗೀಗಿ ತತ್ವಪದ ಹಾಡುಗಾರ ಹಾಗೂ ಜಾನಪದ ಕಲಾ ಪೋಷಕ ತ್ಯಾಗದಕಟ್ಟೆ ಚಂದ್ರಪ್ರಕಾಶ್ ಅವರನ್ನು ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ ಸಲಹೆ ಬಂದಿದೆ ಎಂದರು.</p>.<p>ಚಂದ್ರಪ್ರಕಾಶ್ ಸಾವಿರಾರು ಒಗಟು ಗಾದೆಗಳನ್ನು ಸಂಗ್ರಹಿಸಿದ್ದಾರೆ. ಜಾನಪದ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ಪುಸ್ತಕ ರಚಿಸಿದ್ದಾರೆ. ತಾಲ್ಲೂಕಿನಲ್ಲಿ ನಡೆದ ಸಮ್ಮೇಳನಗಳಿಗೆ ಪ್ರೋತ್ಸಾಹ ನೀಡಿದ್ದು, ಅವರನ್ನು 7ನೇ ಜಾನಪದ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಸಮಂಜಸವಾಗಿದೆ ಎಂದರು.</p>.<p>ಸಾಹಿತಿ ಇಮ್ರಾನ್ ಅಹಮದ್ ಬೇಗ್, ಪರಿಷತ್ತು ತಾಲ್ಲೂಕು ಗೌರವಾಧ್ಯಕ್ಷ ಮರಳಸಿದ್ದಪ್ಪ ಹಾಗೂ ಪರಿಷತ್ತು ಜಿಲ್ಲಾ ಸಂಚಾಲಕಿ ಗಾಯತ್ರಮ್ಮ, ಗಡೀಹಳ್ಳಿ ಮಂಜುನಾಥ್, ಸಾಹಿತಿ ದಂದೂರು ರಾಜಣ್ಣ, ತ್ಯಾಗದಕಟ್ಟೆ ತಿಪ್ಪೇಶ್, ವಿಜಯಕುಮಾರಿ ಮಾತನಾಡಿದರು.</p>.<p>ಪರಿಷತ್ತು ತಾಲ್ಲೂಕು ಘಟಕ ಅಧ್ಯಕ್ಷ ಮಾಳೆನಳ್ಳಿ ಬಸಪ್ಪ, ಶಿವನಿ ಹೋಬಳಿ ಅಧ್ಯಕ್ಷ ಕಾರೇ ಹಳ್ಳಿ ಬಸಪ್ಪ, ಚಿಕ್ಕನಲ್ಲೂರು ಜಯಣ್ಣ, ಕಲಾವಿದೆ ಜ್ಯೋತಿ, ಶಕುಂತಲಮ್ಮ ಜಯಣ್ಣ ಹಾಗೂ ಪುಷ್ಪಗಿರಿ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-126-1392245129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>