<p>ಅಜ್ಜಂಪುರ: ‘ಭದ್ರಾ ಮೇಲ್ದಂಡೆ ಯೋಜನೆಗೆ ಸರ್ಕಾರ ₹4 ಸಾವಿರ ಕೋಟಿ ಅನುದಾನ ಬಿಡುಗಡೆ ಬಾಕಿ ಉಳಿಸಿಕೊಂಡಿದೆ. ಇದರಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ’ ಎಂದು ಸಿರಿಗೆರೆ ತರಳುಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.</p>.<p>ತಾಲ್ಲೂಕಿನ ಜಲಧಿಹಳ್ಳಿ ಗ್ರಾಮದಲ್ಲಿ ಶಂಕರಲಿಂಗೇಶ್ವರ ಸ್ವಾಮಿ ನೂತನ ದೇವಾಲಯ ಪ್ರವೇಶೋತ್ಸವ, ನಂದಿ ಪ್ರತಿಷ್ಠಾಪನೆ, ಶಿಖರ ಕಳಶಾರೋಹಣ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ. ಮಹಿಳೆಯರು ಸ್ವಯಂ ಸ್ಫೂರ್ತಿಯಿಂದ ಗ್ಯಾರಂಟಿ ಯೋಜನೆ ತ್ಯಜಿಸಬೇಕು. ಆಗ ಸರ್ಕಾರ, ಅಭಿವೃದ್ಧಿ ಯೋಜನೆಗೆ ಹಣ ಬಿಡುಗಡೆಗೊಳಿಸಲು ಅನುಕೂಲ ಆಗುತ್ತದೆ ಎಂದರು.</p>.<p>ಮುಖಂಡ ಡಿ.ಎಸ್. ಸುರೇಶ್ ಮಾತನಾಡಿ, ಜಲಧಿಹಳ್ಳಿಯಲ್ಲಿ ಭಕ್ತರ ಸಹಕಾರದಿಂದ ₹2 ಕೋಟಿ ವೆಚ್ಚದಲ್ಲಿ ಶಂಕರಲಿಂಗೇಶ್ವರ ದೇವಾಲಯ ನಿರ್ಮಾಣಗೊಂಡು, ಲೋಕಾರ್ಪಣೆಗೊಂಡಿರುವುದು ಹರ್ಷ ತಂದಿದೆ ಎಂದರು.</p>.<p>ಬಿಜೆಪಿ ಮುಖಂಡ ಸಿ.ಎಂ. ರಾಜಪ್ಪ, ‘ಅಜ್ಜಂಪುರ ಮತ್ತು ತರೀಕೆರೆ ರೈಲು ನಿಲ್ದಾಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಮಾಡಿರುವ ಮನವಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ’ ಎಂದರು.</p>.<p>ಮುಖಂಡರಾದ ಕೆ.ಆರ್. ಆನಂದಪ್ಪ, ಶಂಕರಲಿಂಗಪ್ಪ, ಶಿವಮೂರ್ತಿ, ರಚನಾ ಶ್ರೀನಿವಾಸ್, ದೋರನಾಳು ಪರಮೇಶ್, ನಾಗೇಂದ್ರಪ್ಪ, ಮಂಜುನಾಥ್ ಮಾತನಾ ಡಿದರು. ಉಪನ್ಯಾಸಕ ಹೊನ್ನೇಬಾಗಿ ಬಸವರಾಜ್ ಉಪನ್ಯಾಸ ನೀಡಿದರು.</p>.<p>ಇದೇ ಪ್ರಯುಕ್ತ ಗುರುವಾರ ಧ್ವಜಾರೋಹಣ, ಕಳಶೋತ್ಸವ ನಡೆಯಿತು. ಉಮಾಮಹೇಶ್ವರ ಸ್ವಾಮಿ ದೇವಾಲಯದಿಂದ ಶಂಕರಲಿಂಗೇಶ್ವರ ಸ್ವಾಮಿ ದೇವಾಲಯದವರೆಗೆ ಮೆರವಣಿಗೆ, ದೇವಾಲಯ ಪ್ರವೇಶ, ಗಂಗಾ, ದೀಪ, ಮಹಾಗಣಪತಿ, ನಾಂದಿ, ನವಗ್ರಹ ಪೂಜೆ, ಪಂಚಕಳಸ, ಅಷ್ಟ ದಿಕ್ಪಾಲಕರ ಪೂಜೆ, ಅಷ್ಟಲಕ್ಷ್ಮಿ, ನವದುರ್ಗ ಪೂಜೆ ಜರುಗಿತು.</p>.<p>ಶುಕ್ರವಾರ ವಿವಿಧ ಧಾರ್ಮಿಕ ವಿಧಿಗಳ ಜೊತೆ ಬೀರೂರು ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಶಿಖರ ಕಳಶಾರೋಹಣ ನಡೆಯಿತು. ಉಮಾಮಹೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಸಮುದಾಯ ಭವನ ಸಂಘ, ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮದ ಭಕ್ತರು ಕಾರ್ಯಕ್ರಮ ಆಯೋಜಿಸಿದ್ದರು.</p>.<p>ಏ. 26ರಂದು ಉಮಾಮಹೇಶ್ವರ ಸ್ವಾಮಿ ಕೆಂಡದಾರ್ಚನೆ ಮತ್ತು ರಥೋತ್ಸವ ಆರಂಭಗೊಳ್ಳಲಿದ್ದು, ಕಂಕಣ ಪೂಜೆ, ಧ್ವಜಾರೋಹಣ ನಡೆಯಲಿದೆ. 27ರಂದು ರಥೋತ್ಸವ, ಜಂಪೋತ್ಸವ. 28ರಂದು ಕೆಂಡೋತ್ಸವ, ದಾಸೋಹ. 29ರಂದು ಅವಭೃತ ಸ್ನಾನ ಜರುಗಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-126-1401834369</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಜ್ಜಂಪುರ: ‘ಭದ್ರಾ ಮೇಲ್ದಂಡೆ ಯೋಜನೆಗೆ ಸರ್ಕಾರ ₹4 ಸಾವಿರ ಕೋಟಿ ಅನುದಾನ ಬಿಡುಗಡೆ ಬಾಕಿ ಉಳಿಸಿಕೊಂಡಿದೆ. ಇದರಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ’ ಎಂದು ಸಿರಿಗೆರೆ ತರಳುಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.</p>.<p>ತಾಲ್ಲೂಕಿನ ಜಲಧಿಹಳ್ಳಿ ಗ್ರಾಮದಲ್ಲಿ ಶಂಕರಲಿಂಗೇಶ್ವರ ಸ್ವಾಮಿ ನೂತನ ದೇವಾಲಯ ಪ್ರವೇಶೋತ್ಸವ, ನಂದಿ ಪ್ರತಿಷ್ಠಾಪನೆ, ಶಿಖರ ಕಳಶಾರೋಹಣ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ. ಮಹಿಳೆಯರು ಸ್ವಯಂ ಸ್ಫೂರ್ತಿಯಿಂದ ಗ್ಯಾರಂಟಿ ಯೋಜನೆ ತ್ಯಜಿಸಬೇಕು. ಆಗ ಸರ್ಕಾರ, ಅಭಿವೃದ್ಧಿ ಯೋಜನೆಗೆ ಹಣ ಬಿಡುಗಡೆಗೊಳಿಸಲು ಅನುಕೂಲ ಆಗುತ್ತದೆ ಎಂದರು.</p>.<p>ಮುಖಂಡ ಡಿ.ಎಸ್. ಸುರೇಶ್ ಮಾತನಾಡಿ, ಜಲಧಿಹಳ್ಳಿಯಲ್ಲಿ ಭಕ್ತರ ಸಹಕಾರದಿಂದ ₹2 ಕೋಟಿ ವೆಚ್ಚದಲ್ಲಿ ಶಂಕರಲಿಂಗೇಶ್ವರ ದೇವಾಲಯ ನಿರ್ಮಾಣಗೊಂಡು, ಲೋಕಾರ್ಪಣೆಗೊಂಡಿರುವುದು ಹರ್ಷ ತಂದಿದೆ ಎಂದರು.</p>.<p>ಬಿಜೆಪಿ ಮುಖಂಡ ಸಿ.ಎಂ. ರಾಜಪ್ಪ, ‘ಅಜ್ಜಂಪುರ ಮತ್ತು ತರೀಕೆರೆ ರೈಲು ನಿಲ್ದಾಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಮಾಡಿರುವ ಮನವಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ’ ಎಂದರು.</p>.<p>ಮುಖಂಡರಾದ ಕೆ.ಆರ್. ಆನಂದಪ್ಪ, ಶಂಕರಲಿಂಗಪ್ಪ, ಶಿವಮೂರ್ತಿ, ರಚನಾ ಶ್ರೀನಿವಾಸ್, ದೋರನಾಳು ಪರಮೇಶ್, ನಾಗೇಂದ್ರಪ್ಪ, ಮಂಜುನಾಥ್ ಮಾತನಾ ಡಿದರು. ಉಪನ್ಯಾಸಕ ಹೊನ್ನೇಬಾಗಿ ಬಸವರಾಜ್ ಉಪನ್ಯಾಸ ನೀಡಿದರು.</p>.<p>ಇದೇ ಪ್ರಯುಕ್ತ ಗುರುವಾರ ಧ್ವಜಾರೋಹಣ, ಕಳಶೋತ್ಸವ ನಡೆಯಿತು. ಉಮಾಮಹೇಶ್ವರ ಸ್ವಾಮಿ ದೇವಾಲಯದಿಂದ ಶಂಕರಲಿಂಗೇಶ್ವರ ಸ್ವಾಮಿ ದೇವಾಲಯದವರೆಗೆ ಮೆರವಣಿಗೆ, ದೇವಾಲಯ ಪ್ರವೇಶ, ಗಂಗಾ, ದೀಪ, ಮಹಾಗಣಪತಿ, ನಾಂದಿ, ನವಗ್ರಹ ಪೂಜೆ, ಪಂಚಕಳಸ, ಅಷ್ಟ ದಿಕ್ಪಾಲಕರ ಪೂಜೆ, ಅಷ್ಟಲಕ್ಷ್ಮಿ, ನವದುರ್ಗ ಪೂಜೆ ಜರುಗಿತು.</p>.<p>ಶುಕ್ರವಾರ ವಿವಿಧ ಧಾರ್ಮಿಕ ವಿಧಿಗಳ ಜೊತೆ ಬೀರೂರು ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಶಿಖರ ಕಳಶಾರೋಹಣ ನಡೆಯಿತು. ಉಮಾಮಹೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಸಮುದಾಯ ಭವನ ಸಂಘ, ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮದ ಭಕ್ತರು ಕಾರ್ಯಕ್ರಮ ಆಯೋಜಿಸಿದ್ದರು.</p>.<p>ಏ. 26ರಂದು ಉಮಾಮಹೇಶ್ವರ ಸ್ವಾಮಿ ಕೆಂಡದಾರ್ಚನೆ ಮತ್ತು ರಥೋತ್ಸವ ಆರಂಭಗೊಳ್ಳಲಿದ್ದು, ಕಂಕಣ ಪೂಜೆ, ಧ್ವಜಾರೋಹಣ ನಡೆಯಲಿದೆ. 27ರಂದು ರಥೋತ್ಸವ, ಜಂಪೋತ್ಸವ. 28ರಂದು ಕೆಂಡೋತ್ಸವ, ದಾಸೋಹ. 29ರಂದು ಅವಭೃತ ಸ್ನಾನ ಜರುಗಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-126-1401834369</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>