<p><strong>ಅಜ್ಜಂಪುರ</strong>: ಜಾನಪದ ಮಹಿಳಾ ಪ್ರಧಾನವಾದದ್ದು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ತಾಲ್ಲೂಕು ಮಹಿಳಾ ಘಟಕ ವತಿಯಿಂದ ಈಚೆಗೆ ನಡೆದ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಾನಪದದ ಎಲ್ಲಾ ಆಯಾಮಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಭೌತಿಕ ಪರಂಪರೆ ಗೀತೆಗಳು ಮಹಿಳೆಯರಿಂದಲೇ ಪೋಷಿಸಲ್ಪಡುತ್ತಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವು ಅವರಿಂದಲೇ ಆಗುತ್ತಿದೆ ಎಂದರು.</p>.<p>ಶಿಶು ಪ್ರಾಸ ಗೀತೆ, ದೂರಿ ಪದ, ತೊಟ್ಟಿಲು ಪದಗಳು ಇಂದು ಅಳಿವಿನಂಚಿನಲ್ಲಿವೆ. ಅದನ್ನು ತರಬೇತಿಯ ಮೂಲಕ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಆಗಬೇಕಿದೆ ಎಂದರು.</p>.<p>ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಮ್ಮ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಹಿಳಾ ಘಟಕ ಸ್ಥಾಪನೆಯಾಗಿವೆ. ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಶೀಘ್ರದಲ್ಲಿ ರಚಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್, ಜಾನಪದ ಸಾಹಿತ್ಯ ದಾಖಲೀಕರಣ ಮಾಡಬೇಕಿದೆ. ಗ್ರಂಥ ರೂಪದಲ್ಲಿ ತರಬೇಕಿದೆ ಎಂದು ಸಲಹೆ ನೀಡಿದರು.</p>.<p>ಪರಿಷತ್ ಮಹಿಳಾ ಘಟಕ ಜಿಲ್ಲಾ ಗೌರವಾಧ್ಯಕ್ಷೆ ಸವಿತಾ ಸತ್ಯನಾರಾಯಣ, ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದೆ ಲಕ್ಷ್ಮೀದೇವಮ್ಮ ಮಾತನಾಡಿದರು.</p>.<p>ಇದೇ ವೇಳೆ ಪುಷ್ಪ ಅವರಿಗೆ ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆಯಾಗಿ ಹಾಗೂ ನಿಕಟಪೂರ್ವ ಅಧ್ಯಕ್ಷೆ ವಿಜಯಕುಮಾರಿ ಅವರಿಗೆ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಪದಪ್ರಧಾನ ಮಾಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರತಿಮಾ ಸೋಮಶೇಖರ್, ಪರಿಷತ್ ರಾಮನಗರ ಜಿಲ್ಲಾಧ್ಯಕ್ಷ ಕೆ.ಸಿ.ಕಾಂತಪ್ಪ, ಜಿಲ್ಲಾ ಸಂಚಾಲಕಿ ಆಶಾ ನವೀನ್, ರಂಜಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ</strong>: ಜಾನಪದ ಮಹಿಳಾ ಪ್ರಧಾನವಾದದ್ದು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ತಾಲ್ಲೂಕು ಮಹಿಳಾ ಘಟಕ ವತಿಯಿಂದ ಈಚೆಗೆ ನಡೆದ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಾನಪದದ ಎಲ್ಲಾ ಆಯಾಮಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಭೌತಿಕ ಪರಂಪರೆ ಗೀತೆಗಳು ಮಹಿಳೆಯರಿಂದಲೇ ಪೋಷಿಸಲ್ಪಡುತ್ತಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವು ಅವರಿಂದಲೇ ಆಗುತ್ತಿದೆ ಎಂದರು.</p>.<p>ಶಿಶು ಪ್ರಾಸ ಗೀತೆ, ದೂರಿ ಪದ, ತೊಟ್ಟಿಲು ಪದಗಳು ಇಂದು ಅಳಿವಿನಂಚಿನಲ್ಲಿವೆ. ಅದನ್ನು ತರಬೇತಿಯ ಮೂಲಕ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಆಗಬೇಕಿದೆ ಎಂದರು.</p>.<p>ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಮ್ಮ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಹಿಳಾ ಘಟಕ ಸ್ಥಾಪನೆಯಾಗಿವೆ. ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಶೀಘ್ರದಲ್ಲಿ ರಚಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್, ಜಾನಪದ ಸಾಹಿತ್ಯ ದಾಖಲೀಕರಣ ಮಾಡಬೇಕಿದೆ. ಗ್ರಂಥ ರೂಪದಲ್ಲಿ ತರಬೇಕಿದೆ ಎಂದು ಸಲಹೆ ನೀಡಿದರು.</p>.<p>ಪರಿಷತ್ ಮಹಿಳಾ ಘಟಕ ಜಿಲ್ಲಾ ಗೌರವಾಧ್ಯಕ್ಷೆ ಸವಿತಾ ಸತ್ಯನಾರಾಯಣ, ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದೆ ಲಕ್ಷ್ಮೀದೇವಮ್ಮ ಮಾತನಾಡಿದರು.</p>.<p>ಇದೇ ವೇಳೆ ಪುಷ್ಪ ಅವರಿಗೆ ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆಯಾಗಿ ಹಾಗೂ ನಿಕಟಪೂರ್ವ ಅಧ್ಯಕ್ಷೆ ವಿಜಯಕುಮಾರಿ ಅವರಿಗೆ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಪದಪ್ರಧಾನ ಮಾಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರತಿಮಾ ಸೋಮಶೇಖರ್, ಪರಿಷತ್ ರಾಮನಗರ ಜಿಲ್ಲಾಧ್ಯಕ್ಷ ಕೆ.ಸಿ.ಕಾಂತಪ್ಪ, ಜಿಲ್ಲಾ ಸಂಚಾಲಕಿ ಆಶಾ ನವೀನ್, ರಂಜಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>