ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಮುಖಂಡ ಎಂ. ಮಹೇಶ್ವರಯ್ಯ ಮಾತನಾಡಿ, ಸರ್ಕಾರ, ರೈತ ಪರ ಯೋಜನೆ ಜಾರಿಗೊಳಿಸಬೇಕು. ಅತಿವೃಷ್ಟಿ, ಅನಾವೃಷ್ಟಿ ಮತ್ತು ಬೆಲೆ ಕುಸಿತದಂತಹ ಸಂದರ್ಭದಲ್ಲಿ ರೈತರಿಗೆ ಸಹಾಯಹಸ್ತ ಚಾಚಬೇಕು. ಹತಾಶ ಸ್ಥಿತಿ ತಲುಪಿರುವ ರೈತ ಸಮುದಾಯಕ್ಕೆ ಭರವಸೆಯ ಬೆಳಕು ಮೂಡಿಸಬೇಕು ಎಂದು ಒತ್ತಾಯಿಸಿದರು.